ದೇಶ- ವಿದೇಶ

ಭೂಷಣ್‌ ಸ್ಟೀಲ್‌ ಬ್ಯಾಂಕ್‌ ವಂಚನೆ ಪ್ರಕರಣ: ಇಡಿಯಿಂದ JSWಕಂಪೆನಿಗೆ 4,025 ಕೋಟಿ ರೂ. ಹಸ್ತಾಂತರ

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ.

ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್‌ ಸ್ಟೀಲ್‌ಗೆ ಸಂಬಂಧಿಸಿದ ಆಸ್ತಿಯನ್ನು ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಯೂ ಜೆಎಸ್‌ಡಬ್ಲ್ಯೂ ಕಂಪನಿಗೆ ಇಂದು(ಡಿ.13) ಹಸ್ತಾಂತರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂಷಣ್‌ ಸ್ಟೀಲ್‌ ಕಂಪೆನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಅದರಲ್ಲಿ ಬ್ಯಾಂಕ್‌ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಭೂಷಣ್‌ ಕಂಪೆನಿ ಎದುರಿಸುತ್ತಿತ್ತು. ಹೀಗಾಗಿ ದಿವಾಳಿಯಾದ ಕಾರಣ ಆ ಕಂಪೆನಿಯ ಆಸ್ತಿಯನ್ನು ಖರೀದಿಸಲು ಜೆಎಸ್‌ಡಬ್ಲ್ಯೂ ಆಸಕ್ತಿ ಹೊಂದಿತ್ತು. ಕಾರ್ಪೋರೇಟ್‌ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್‌ ಸ್ಟೀಲ್‌ನ ಆಸ್ತಿ ಖರೀದಿಗೆ ಜೆಎಸ್‌ಡಬ್ಲ್ಯೂ ಕಂಪೆನಿ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಇಡಿ ತನಿಖಾ ಸಂಸ್ಥೆಗೆ ಭೂಷಣ್‌ ಸ್ಟೀಲ್‌ ಕಂಪೆನಿಯ ಸುಮಾರು 4,025 ಕೋಟಿ ರೂ. ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ಹಸ್ತಾಂತರರಿಸುವಂತೆ ಆದೇಶ ನೀಡಿತ್ತು. ಸುಪ್ರೀಂನ ಈ ಆದೇಶದ ಮೇರೆಗೆ ಇಡಿ ತನಿಖಾ ಸಂಸ್ಥೆಯೂ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ವರ್ಗಾಯಿಸಿದೆ.

 

ಅರ್ಚನ ಎಸ್‌ ಎಸ್

Recent Posts

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…

26 mins ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

1 hour ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

2 hours ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

3 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

3 hours ago