ನವದೆಹಲಿ: ಸುಪ್ರೀಂಕೋರ್ಟ್ನ ಆದೇಶದಂತೆ ಭೂಷಣ್ ಸ್ಟೀಲ್ ಹಾಗೂ ಪವರ್ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್ಡಬ್ಲ್ಯೂ ಸ್ಟೀಲ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ.
ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್ ಸ್ಟೀಲ್ಗೆ ಸಂಬಂಧಿಸಿದ ಆಸ್ತಿಯನ್ನು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಯೂ ಜೆಎಸ್ಡಬ್ಲ್ಯೂ ಕಂಪನಿಗೆ ಇಂದು(ಡಿ.13) ಹಸ್ತಾಂತರಿಸಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂಷಣ್ ಸ್ಟೀಲ್ ಕಂಪೆನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಅದರಲ್ಲಿ ಬ್ಯಾಂಕ್ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಭೂಷಣ್ ಕಂಪೆನಿ ಎದುರಿಸುತ್ತಿತ್ತು. ಹೀಗಾಗಿ ದಿವಾಳಿಯಾದ ಕಾರಣ ಆ ಕಂಪೆನಿಯ ಆಸ್ತಿಯನ್ನು ಖರೀದಿಸಲು ಜೆಎಸ್ಡಬ್ಲ್ಯೂ ಆಸಕ್ತಿ ಹೊಂದಿತ್ತು. ಕಾರ್ಪೋರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್ ಸ್ಟೀಲ್ನ ಆಸ್ತಿ ಖರೀದಿಗೆ ಜೆಎಸ್ಡಬ್ಲ್ಯೂ ಕಂಪೆನಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿತ್ತು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇಡಿ ತನಿಖಾ ಸಂಸ್ಥೆಗೆ ಭೂಷಣ್ ಸ್ಟೀಲ್ ಕಂಪೆನಿಯ ಸುಮಾರು 4,025 ಕೋಟಿ ರೂ. ಆಸ್ತಿಯನ್ನು ಜೆಎಸ್ಡಬ್ಲ್ಯೂ ಕಂಪೆನಿಗೆ ಹಸ್ತಾಂತರರಿಸುವಂತೆ ಆದೇಶ ನೀಡಿತ್ತು. ಸುಪ್ರೀಂನ ಈ ಆದೇಶದ ಮೇರೆಗೆ ಇಡಿ ತನಿಖಾ ಸಂಸ್ಥೆಯೂ ಆಸ್ತಿಯನ್ನು ಜೆಎಸ್ಡಬ್ಲ್ಯೂ ಕಂಪೆನಿಗೆ ವರ್ಗಾಯಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…