ದೇಶ- ವಿದೇಶ

ಭೂಷಣ್‌ ಸ್ಟೀಲ್‌ ಬ್ಯಾಂಕ್‌ ವಂಚನೆ ಪ್ರಕರಣ: ಇಡಿಯಿಂದ JSWಕಂಪೆನಿಗೆ 4,025 ಕೋಟಿ ರೂ. ಹಸ್ತಾಂತರ

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ.

ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್‌ ಸ್ಟೀಲ್‌ಗೆ ಸಂಬಂಧಿಸಿದ ಆಸ್ತಿಯನ್ನು ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಯೂ ಜೆಎಸ್‌ಡಬ್ಲ್ಯೂ ಕಂಪನಿಗೆ ಇಂದು(ಡಿ.13) ಹಸ್ತಾಂತರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂಷಣ್‌ ಸ್ಟೀಲ್‌ ಕಂಪೆನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಅದರಲ್ಲಿ ಬ್ಯಾಂಕ್‌ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಭೂಷಣ್‌ ಕಂಪೆನಿ ಎದುರಿಸುತ್ತಿತ್ತು. ಹೀಗಾಗಿ ದಿವಾಳಿಯಾದ ಕಾರಣ ಆ ಕಂಪೆನಿಯ ಆಸ್ತಿಯನ್ನು ಖರೀದಿಸಲು ಜೆಎಸ್‌ಡಬ್ಲ್ಯೂ ಆಸಕ್ತಿ ಹೊಂದಿತ್ತು. ಕಾರ್ಪೋರೇಟ್‌ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್‌ ಸ್ಟೀಲ್‌ನ ಆಸ್ತಿ ಖರೀದಿಗೆ ಜೆಎಸ್‌ಡಬ್ಲ್ಯೂ ಕಂಪೆನಿ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಇಡಿ ತನಿಖಾ ಸಂಸ್ಥೆಗೆ ಭೂಷಣ್‌ ಸ್ಟೀಲ್‌ ಕಂಪೆನಿಯ ಸುಮಾರು 4,025 ಕೋಟಿ ರೂ. ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ಹಸ್ತಾಂತರರಿಸುವಂತೆ ಆದೇಶ ನೀಡಿತ್ತು. ಸುಪ್ರೀಂನ ಈ ಆದೇಶದ ಮೇರೆಗೆ ಇಡಿ ತನಿಖಾ ಸಂಸ್ಥೆಯೂ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ವರ್ಗಾಯಿಸಿದೆ.

 

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago