ದೇಶ- ವಿದೇಶ

ಭೂಷಣ್‌ ಸ್ಟೀಲ್‌ ಬ್ಯಾಂಕ್‌ ವಂಚನೆ ಪ್ರಕರಣ: ಇಡಿಯಿಂದ JSWಕಂಪೆನಿಗೆ 4,025 ಕೋಟಿ ರೂ. ಹಸ್ತಾಂತರ

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ.

ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್‌ ಸ್ಟೀಲ್‌ಗೆ ಸಂಬಂಧಿಸಿದ ಆಸ್ತಿಯನ್ನು ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಯೂ ಜೆಎಸ್‌ಡಬ್ಲ್ಯೂ ಕಂಪನಿಗೆ ಇಂದು(ಡಿ.13) ಹಸ್ತಾಂತರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂಷಣ್‌ ಸ್ಟೀಲ್‌ ಕಂಪೆನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಅದರಲ್ಲಿ ಬ್ಯಾಂಕ್‌ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಭೂಷಣ್‌ ಕಂಪೆನಿ ಎದುರಿಸುತ್ತಿತ್ತು. ಹೀಗಾಗಿ ದಿವಾಳಿಯಾದ ಕಾರಣ ಆ ಕಂಪೆನಿಯ ಆಸ್ತಿಯನ್ನು ಖರೀದಿಸಲು ಜೆಎಸ್‌ಡಬ್ಲ್ಯೂ ಆಸಕ್ತಿ ಹೊಂದಿತ್ತು. ಕಾರ್ಪೋರೇಟ್‌ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್‌ ಸ್ಟೀಲ್‌ನ ಆಸ್ತಿ ಖರೀದಿಗೆ ಜೆಎಸ್‌ಡಬ್ಲ್ಯೂ ಕಂಪೆನಿ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಇಡಿ ತನಿಖಾ ಸಂಸ್ಥೆಗೆ ಭೂಷಣ್‌ ಸ್ಟೀಲ್‌ ಕಂಪೆನಿಯ ಸುಮಾರು 4,025 ಕೋಟಿ ರೂ. ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ಹಸ್ತಾಂತರರಿಸುವಂತೆ ಆದೇಶ ನೀಡಿತ್ತು. ಸುಪ್ರೀಂನ ಈ ಆದೇಶದ ಮೇರೆಗೆ ಇಡಿ ತನಿಖಾ ಸಂಸ್ಥೆಯೂ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ವರ್ಗಾಯಿಸಿದೆ.

 

ಅರ್ಚನ ಎಸ್‌ ಎಸ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

25 mins ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

36 mins ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

3 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago