ದೇಶ- ವಿದೇಶ

ಶಂಭು ಗಡಿಯಲ್ಲಿ ಅನ್ನದಾತರ ಬೃಹತ್‌ ಪ್ರತಿಭಟನೆ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.

ಇಂದು ಮಧ್ಯಾಹ್ನ ಶಂಭು ಗಡಿಯಿಂದ ದೆಹಲಿಯ ಸಂಸತ್‌ ಭವನಕ್ಕೆ ಪಾದಯಾತ್ರೆ ಪ್ರಾರಂಭವಾಗಲಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಎಂಎಸ್‌ಸಿಕೆ ಕಾನೂನುಬದ್ಧ ಖಾತರಿ, ರೈತರ ಸಾಲಮನ್ನಾ, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ, ವಿದ್ಯುತ್‌ ದರ ಹೆಚ್ಚಿಸಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. 2013ರ ಭೂ ಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯ ಹಾಗೂ 2020-21ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಸಹ ಮಾಡಲಾಗಿದೆ.

ಇನ್ನು ದೆಹಲಿಯ ಸಂಸತ್‌ ಭವನದ ಸುತ್ತಲೂ ಭಾರೀ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…

1 min ago

ಕ್ಯಾರಕಸ್‌ ಮೇಲೆ ಅಮೆರಿಕಾ ವೈಮಾನಿಕ ದಾಳಿ ; ವೆನೆಜುವೆಲಾ ಅಧ್ಯಕ್ಷ ಮಡುರೊ ಪತ್ನಿ ಸೆರೆ

ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…

12 mins ago

ದೇಶದ ಮಹಿಳಾ ಸಾಕ್ಷರತೆ ʼಸಾವಿತ್ರಾ ಬಾಯಿಪುಲೆʼ ಕೊಡುಗೆ ಅಪಾರ : ಮಾಜಿ ಸಚಿವ ಎನ್.ಮಹೇಶ್‌

ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್‌ಭವನದಲ್ಲಿ…

35 mins ago

ಆರು ತಿಂಗಳಲ್ಲಿ ಹಳೇ ಉಂಡುವಾಡಿ ಕಾಮಗಾರಿ ಪೂರ್ಣ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…

55 mins ago

IPL 2026 | ಬಾಂಗ್ಲ ಆಟಗಾರನನ್ನು ಕೈ ಬಿಟ್ಟ ʼಕೆಕೆಆರ್‌ʼ

ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ…

1 hour ago

ಕೋಟೆ ಕಟ್ಕೊಂಡು ಡ್ರಾಮ ಮಾಡ್ತಾವ್ರೆ : ಜನಾರ್ಧನ ರೆಡ್ಡಿ ಬಗ್ಗೆ ಡಿಕೆಶಿ ರೋಷಾಗ್ನಿ

ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ…

2 hours ago