ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.
ಇಂದು ಮಧ್ಯಾಹ್ನ ಶಂಭು ಗಡಿಯಿಂದ ದೆಹಲಿಯ ಸಂಸತ್ ಭವನಕ್ಕೆ ಪಾದಯಾತ್ರೆ ಪ್ರಾರಂಭವಾಗಲಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಎಂಎಸ್ಸಿಕೆ ಕಾನೂನುಬದ್ಧ ಖಾತರಿ, ರೈತರ ಸಾಲಮನ್ನಾ, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ, ವಿದ್ಯುತ್ ದರ ಹೆಚ್ಚಿಸಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. 2013ರ ಭೂ ಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯ ಹಾಗೂ 2020-21ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.
ಇನ್ನು ದೆಹಲಿಯ ಸಂಸತ್ ಭವನದ ಸುತ್ತಲೂ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…