ದೇಶ- ವಿದೇಶ

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಿತೀಶ್ ಕುಮಾರ್ ಅವರ ರಾಜೀನಾಮೆಯೊಂದಿಗೆ ಬಿಹಾರದ ರಾಜಕೀಯ ವಲಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಕಾರಣವಾಗಿದೆ.

ಮಾರ್ಚ್.16 ರಂದು ನಿತೀಶ್ ಕುಮಾರ್ ಅವರು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ನಂತರ, ಅವರು 14 ದಿನಗಳ ಒಳಗೆ ರಾಜ್ಯ ಶಾಸಕಾಂಗದ ಸದಸ್ಯತ್ವವನ್ನು ತ್ಯಜಿಸಬೇಕಾಗಿತ್ತು. ಮಾರ್ಚ್ 30 ಅವರು ಸದಸ್ಯತ್ವ ತ್ಯಜಿಸಲು ಕೊನೆಯ ದಿನವಾಗಿತ್ತು. ಸಮಯ ಪಾಲನೆಗೆ ಹೆಸರುವಾಸಿಯಾಗಿರುವ ನಿತೀಶ್ ಕುಮಾರ್ ಅವರು ಕೊನೆಯ ದಿನವೇ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಸಂವಿಧಾನದ 101 ಮತ್ತು 190 ನೇ ವಿಧಿಗಳ ಅಡಿಯಲ್ಲಿ ರೂಪಿಸಲಾದ 1950 ರ ಏಕಕಾಲಿಕ ಸದಸ್ಯತ್ವ ನಿಷೇಧ ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಎರಡರ ಸದಸ್ಯರಾಗಿ ಉಳಿಯಲು ಸಾಧ್ಯವಿಲ್ಲ. ಒಂದು ವೇಳೆ ಒಬ್ಬ ವ್ಯಕ್ತಿಯು ಎರಡೂ ಸ್ಥಾನಗಳಿಗೆ ಆಯ್ಕೆಯಾದರೆ, ಅವರು ನಿಗದಿತ ಸಮಯದೊಳಗೆ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪಾಲಿಸಿ ನಿತೀಶ್ ಕುಮಾರ್ ತಮ್ಮ ವಿಧಾನ ಪರಿಷತ್ ಸದಸ್ಯತ್ವವನ್ನು ತ್ಯಜಿಸಿದ್ದಾರೆ.

ನಿತೀಶ್ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದರಿಂದ, ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ನಿತೀಶ್ ಕುಮಾರ್ ಅವರು ರಾಜ್ಯಸಭೆ ಸದಸ್ಯರಾಗಿ ಮುಂದುವರಿಯುವುದರೊಂದಿಗೆ, ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖವೊಂದು ಬರುವ ಸಾಧ್ಯತೆಯಿದೆ. ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಈ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

23 mins ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

24 mins ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

1 hour ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

3 hours ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

3 hours ago