ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಿತೀಶ್ ಕುಮಾರ್ ಅವರ ರಾಜೀನಾಮೆಯೊಂದಿಗೆ ಬಿಹಾರದ ರಾಜಕೀಯ ವಲಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಕಾರಣವಾಗಿದೆ.
ಮಾರ್ಚ್.16 ರಂದು ನಿತೀಶ್ ಕುಮಾರ್ ಅವರು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ನಂತರ, ಅವರು 14 ದಿನಗಳ ಒಳಗೆ ರಾಜ್ಯ ಶಾಸಕಾಂಗದ ಸದಸ್ಯತ್ವವನ್ನು ತ್ಯಜಿಸಬೇಕಾಗಿತ್ತು. ಮಾರ್ಚ್ 30 ಅವರು ಸದಸ್ಯತ್ವ ತ್ಯಜಿಸಲು ಕೊನೆಯ ದಿನವಾಗಿತ್ತು. ಸಮಯ ಪಾಲನೆಗೆ ಹೆಸರುವಾಸಿಯಾಗಿರುವ ನಿತೀಶ್ ಕುಮಾರ್ ಅವರು ಕೊನೆಯ ದಿನವೇ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಸಂವಿಧಾನದ 101 ಮತ್ತು 190 ನೇ ವಿಧಿಗಳ ಅಡಿಯಲ್ಲಿ ರೂಪಿಸಲಾದ 1950 ರ ಏಕಕಾಲಿಕ ಸದಸ್ಯತ್ವ ನಿಷೇಧ ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಎರಡರ ಸದಸ್ಯರಾಗಿ ಉಳಿಯಲು ಸಾಧ್ಯವಿಲ್ಲ. ಒಂದು ವೇಳೆ ಒಬ್ಬ ವ್ಯಕ್ತಿಯು ಎರಡೂ ಸ್ಥಾನಗಳಿಗೆ ಆಯ್ಕೆಯಾದರೆ, ಅವರು ನಿಗದಿತ ಸಮಯದೊಳಗೆ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪಾಲಿಸಿ ನಿತೀಶ್ ಕುಮಾರ್ ತಮ್ಮ ವಿಧಾನ ಪರಿಷತ್ ಸದಸ್ಯತ್ವವನ್ನು ತ್ಯಜಿಸಿದ್ದಾರೆ.
ನಿತೀಶ್ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದರಿಂದ, ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ನಿತೀಶ್ ಕುಮಾರ್ ಅವರು ರಾಜ್ಯಸಭೆ ಸದಸ್ಯರಾಗಿ ಮುಂದುವರಿಯುವುದರೊಂದಿಗೆ, ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖವೊಂದು ಬರುವ ಸಾಧ್ಯತೆಯಿದೆ. ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಈ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…