Nitish Kumar announces 35% reservation for women in government jobs in Bihar
ಪಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎನ್ಡಿಎ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ.
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕರಿಂದ ಈ ಹೇಳಿಕೆ ದಾಖಲಾಗಿದೆ. ಸೀಟು ಹಂಚಿಕೆ ಸಂಬಂಧ ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಮತವಿಲ್ಲ. ಶೀಘ್ರದಲ್ಲೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ : ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಚುನಾವಣೆ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಎನ್ಡಿಎ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿ. ಎನ್ಡಿಎದಲ್ಲಿ ಎಲ್ಲವೂ ಸರಿಯಾಗಿದ್ದು, ಭಿನ್ನಮತವಿಲ್ಲ. ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಈ ನಡುವೆ ವಿರೋಧ ಪಕ್ಷಗಳ ಮಹಾಘಟಬಂಧನ ಮೈತ್ರಿಯ ವಿರುದ್ಧ ಗಿರಿರಾಜ್ ವಾಗ್ದಾಳಿ ನಡೆಸಿದ್ದಾರೆ. ತೇಜಸ್ವಿ ಯಾದವ್ ಆರ್ಜೆಡಿಯ ಮುಖ್ಯಮಂತ್ರಿ ಅಭ್ಯರ್ಥಿ ಆಗಿದ್ದು, ಮಹಾಘಟಬಂಧನ ಮೈತ್ರಿಯ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ ಹೇಳಿದೆ. ಇದರಿಂದಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಚಿಂತಿತರಾಗಿದ್ದಾರೆ. ಮಹಾಘಟಬಂಧನದಲ್ಲಿ ನಾಯಕತ್ವ ಇನ್ನೂ ಅಂತಿಮವಾಗಿಲ್ಲ. ಮತ್ತೊಂದೆಡೆ ಎನ್ಡಿಎ ನಾಯಕತ್ವದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದಾರೆ. ೨೪೩ ಸ್ಥಾನ ಬಲದ ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ ೬ ಹಾಗೂ ೧೧ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಬಳಿಕ ನವೆಂಬರ್ ೧೪ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…