ದೇಶ- ವಿದೇಶ

Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ.

ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಆರ್‌ಜೆಡಿಯ ಬಿನೋದ್‌ ಮಿಶ್ರಾ ಮತ್ತು ಜನ್‌ ಸುರಾಜ್‌ ಪಕ್ಷದ ಅಭ್ಯರ್ಥಿ ಬಿಪ್ಲಾವ್‌ ಕುಮಾರ್‌ ಚೌಧರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ರಾಕೂರ್‌ 28,104 ಮತ ಮುನ್ನೆಡೆ ಇದ್ದರೆ, ಆರ್‌ಜೆಡಿಯ ಮಿಶ್ರಾ 21,311 ಮತ ಹಾಗೂ ಜನ್‌ ಸುರಾಜ್‌ ಪಕ್ಷದ ಬಿಪ್ಲಾವ್‌ ಕೇವಲ 859 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಆರಂಭಿಕ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಮೈಥಿಲಿ ಠಾಕೂರ್, “ನನಗೆ ನಿಜವಾಗಿಯೂ ಸಂತೋಷವಾಗುತ್ತಿದೆ. ಫಲಿತಾಂಶದ ಬಗ್ಗೆ ನನಗೆ ಅನುಮಾನ ಇರಲಿಲ್ಲ. ಜನರು ನನಗೆ ಮತ್ತು ನನ್ನ ಪಕ್ಷಕ್ಕೆ ತೋರಿಸಿದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಮುಂಬರುವ ಐದು ವರ್ಷಗಳಲ್ಲಿ ನಾನು ಜನರ ಪರವಾಗಿ ಇರುತ್ತೇನೆ. ನಾನು ಈ ಮಣ್ಣಿನ ಮಗಳು. ಮತದಾರರನ್ನು ಕೇವಲ ಮತದಾರರಾಗಿ ನೋಡಲಿಲ್ಲ, ಕುಟುಂಬವಾಗಿ ನೋಡಿದೆ, ಜನರು ಅದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನನಗೆ ಕೇವಲ 25 ವರ್ಷ, ಆದರೆ ಮುಂದಿನ ದಿನಗಳಲ್ಲಿ ನಾನು ನನ್ನನ್ನು ಸಾಬೀತುಪಡಿಸುತ್ತೇನೆ” ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago