ದೇಶ- ವಿದೇಶ

Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ.

ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಆರ್‌ಜೆಡಿಯ ಬಿನೋದ್‌ ಮಿಶ್ರಾ ಮತ್ತು ಜನ್‌ ಸುರಾಜ್‌ ಪಕ್ಷದ ಅಭ್ಯರ್ಥಿ ಬಿಪ್ಲಾವ್‌ ಕುಮಾರ್‌ ಚೌಧರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ರಾಕೂರ್‌ 28,104 ಮತ ಮುನ್ನೆಡೆ ಇದ್ದರೆ, ಆರ್‌ಜೆಡಿಯ ಮಿಶ್ರಾ 21,311 ಮತ ಹಾಗೂ ಜನ್‌ ಸುರಾಜ್‌ ಪಕ್ಷದ ಬಿಪ್ಲಾವ್‌ ಕೇವಲ 859 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಆರಂಭಿಕ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಮೈಥಿಲಿ ಠಾಕೂರ್, “ನನಗೆ ನಿಜವಾಗಿಯೂ ಸಂತೋಷವಾಗುತ್ತಿದೆ. ಫಲಿತಾಂಶದ ಬಗ್ಗೆ ನನಗೆ ಅನುಮಾನ ಇರಲಿಲ್ಲ. ಜನರು ನನಗೆ ಮತ್ತು ನನ್ನ ಪಕ್ಷಕ್ಕೆ ತೋರಿಸಿದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಮುಂಬರುವ ಐದು ವರ್ಷಗಳಲ್ಲಿ ನಾನು ಜನರ ಪರವಾಗಿ ಇರುತ್ತೇನೆ. ನಾನು ಈ ಮಣ್ಣಿನ ಮಗಳು. ಮತದಾರರನ್ನು ಕೇವಲ ಮತದಾರರಾಗಿ ನೋಡಲಿಲ್ಲ, ಕುಟುಂಬವಾಗಿ ನೋಡಿದೆ, ಜನರು ಅದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನನಗೆ ಕೇವಲ 25 ವರ್ಷ, ಆದರೆ ಮುಂದಿನ ದಿನಗಳಲ್ಲಿ ನಾನು ನನ್ನನ್ನು ಸಾಬೀತುಪಡಿಸುತ್ತೇನೆ” ಎಂದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

9 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

11 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

11 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago