ದೇಶ- ವಿದೇಶ

Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ.

ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಆರ್‌ಜೆಡಿಯ ಬಿನೋದ್‌ ಮಿಶ್ರಾ ಮತ್ತು ಜನ್‌ ಸುರಾಜ್‌ ಪಕ್ಷದ ಅಭ್ಯರ್ಥಿ ಬಿಪ್ಲಾವ್‌ ಕುಮಾರ್‌ ಚೌಧರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ರಾಕೂರ್‌ 28,104 ಮತ ಮುನ್ನೆಡೆ ಇದ್ದರೆ, ಆರ್‌ಜೆಡಿಯ ಮಿಶ್ರಾ 21,311 ಮತ ಹಾಗೂ ಜನ್‌ ಸುರಾಜ್‌ ಪಕ್ಷದ ಬಿಪ್ಲಾವ್‌ ಕೇವಲ 859 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಆರಂಭಿಕ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಮೈಥಿಲಿ ಠಾಕೂರ್, “ನನಗೆ ನಿಜವಾಗಿಯೂ ಸಂತೋಷವಾಗುತ್ತಿದೆ. ಫಲಿತಾಂಶದ ಬಗ್ಗೆ ನನಗೆ ಅನುಮಾನ ಇರಲಿಲ್ಲ. ಜನರು ನನಗೆ ಮತ್ತು ನನ್ನ ಪಕ್ಷಕ್ಕೆ ತೋರಿಸಿದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಮುಂಬರುವ ಐದು ವರ್ಷಗಳಲ್ಲಿ ನಾನು ಜನರ ಪರವಾಗಿ ಇರುತ್ತೇನೆ. ನಾನು ಈ ಮಣ್ಣಿನ ಮಗಳು. ಮತದಾರರನ್ನು ಕೇವಲ ಮತದಾರರಾಗಿ ನೋಡಲಿಲ್ಲ, ಕುಟುಂಬವಾಗಿ ನೋಡಿದೆ, ಜನರು ಅದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನನಗೆ ಕೇವಲ 25 ವರ್ಷ, ಆದರೆ ಮುಂದಿನ ದಿನಗಳಲ್ಲಿ ನಾನು ನನ್ನನ್ನು ಸಾಬೀತುಪಡಿಸುತ್ತೇನೆ” ಎಂದರು.

ಆಂದೋಲನ ಡೆಸ್ಕ್

Recent Posts

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

12 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

21 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

1 hour ago