ದೇಶ- ವಿದೇಶ

Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ.

ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಆರ್‌ಜೆಡಿಯ ಬಿನೋದ್‌ ಮಿಶ್ರಾ ಮತ್ತು ಜನ್‌ ಸುರಾಜ್‌ ಪಕ್ಷದ ಅಭ್ಯರ್ಥಿ ಬಿಪ್ಲಾವ್‌ ಕುಮಾರ್‌ ಚೌಧರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ರಾಕೂರ್‌ 28,104 ಮತ ಮುನ್ನೆಡೆ ಇದ್ದರೆ, ಆರ್‌ಜೆಡಿಯ ಮಿಶ್ರಾ 21,311 ಮತ ಹಾಗೂ ಜನ್‌ ಸುರಾಜ್‌ ಪಕ್ಷದ ಬಿಪ್ಲಾವ್‌ ಕೇವಲ 859 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಆರಂಭಿಕ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಮೈಥಿಲಿ ಠಾಕೂರ್, “ನನಗೆ ನಿಜವಾಗಿಯೂ ಸಂತೋಷವಾಗುತ್ತಿದೆ. ಫಲಿತಾಂಶದ ಬಗ್ಗೆ ನನಗೆ ಅನುಮಾನ ಇರಲಿಲ್ಲ. ಜನರು ನನಗೆ ಮತ್ತು ನನ್ನ ಪಕ್ಷಕ್ಕೆ ತೋರಿಸಿದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಮುಂಬರುವ ಐದು ವರ್ಷಗಳಲ್ಲಿ ನಾನು ಜನರ ಪರವಾಗಿ ಇರುತ್ತೇನೆ. ನಾನು ಈ ಮಣ್ಣಿನ ಮಗಳು. ಮತದಾರರನ್ನು ಕೇವಲ ಮತದಾರರಾಗಿ ನೋಡಲಿಲ್ಲ, ಕುಟುಂಬವಾಗಿ ನೋಡಿದೆ, ಜನರು ಅದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನನಗೆ ಕೇವಲ 25 ವರ್ಷ, ಆದರೆ ಮುಂದಿನ ದಿನಗಳಲ್ಲಿ ನಾನು ನನ್ನನ್ನು ಸಾಬೀತುಪಡಿಸುತ್ತೇನೆ” ಎಂದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago