ದೇಶ- ವಿದೇಶ

Bihar Result | ಜೈಲಿನಲ್ಲಿದ್ದುಕೊಂಡೇ ಭಾರೀ ಮತಗಳಿಂದ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ

ಪಾಟ್ನಾ : ಜೈಲಿನಲ್ಲಿರುವ ಜೆಡಿಯು ಅಭ್ಯರ್ಥಿ ಅನಂತ್ ಕುಮಾರ್‌ ಸಿಂಗ್ 28,206 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 91,416 ಮತಗಳನ್ನು ಪಡೆದರೆ ಆರ್‌ಜೆಡಿಯ ವೀಣಾ ದೇವಿ ಅವರು 63,210 ಮತಗಳನ್ನು ಪಡೆದಿದ್ದಾರೆ.

ಜನ್ ಸುರಾಜ್ ಪಾರ್ಟಿ ಬೆಂಬಲಿಗನನ್ನು ಕೊಲೆಗೈದ ಪ್ರಕರಣದಲ್ಲಿ ಅನಂತ್ ಕುಮಾರ್‌ ಸಿಂಗ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. 2005 ರಲ್ಲಿ ಮೊದಲ ಚುನಾವಣೆ ಗೆದ್ದ ಬಳಿಕ ಇಲ್ಲಿಯವರೆಗೆ ಐದು ಬಾರಿ ಮೊಕಾಮಾದಿಂದ ಆಯ್ಕೆ ಆಗುತ್ತಲೇ ಬಂದಿದ್ದಾರೆ. 2010 ರಲ್ಲಿ ಅವರು ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ 2015 ರಲ್ಲಿ ಜೆಡಿಯು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದದ್ದರು. 2020 ರ ಚುನಾವಣೆಗೆ ಮೊದಲು ಅವರು ಆರ್‌ಜೆಡಿ ಸೇರಿದ್ದರು.

ಇದನ್ನು ಓದಿ: ಭಾರಿ ಜಯದತ್ತ ಎನ್‌ಡಿಎ ; ಬಿಜೆಪಿ ಅತಿ ದೊಡ್ಡ ಪಕ್ಷ

28 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರೂ, ಶಸ್ತ್ರಾಸ್ತ್ರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಸಿಂಗ್ 2022 ರಲ್ಲಿ ತಮ್ಮ ವಿಧಾನಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ನೀಲಂ ದೇವಿ ಸ್ಪರ್ಧಿಸಿ ಜಯಗಳಿಸಿದ್ದರು. ನವೆಂಬರ್ 2 ರಂದು ಜನ ಸುರಾಜ್‌ ಅಭ್ಯರ್ಥಿ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದ ದರೋಡೆಕೋರ, ರಾಜಕಾರಣಿ ದುಲಾರ್ ಸಿಂಗ್ ಯಾದವ್ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಅನಂತ್ ಕುಮಾರ್‌ ಸಿಂಗ್ ಅವರನ್ನು ಬಂಧಿಸಿದ್ದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

2 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

2 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

2 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

2 hours ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

2 hours ago