ದೇಶ- ವಿದೇಶ

Bihar Result | ಜೈಲಿನಲ್ಲಿದ್ದುಕೊಂಡೇ ಭಾರೀ ಮತಗಳಿಂದ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ

ಪಾಟ್ನಾ : ಜೈಲಿನಲ್ಲಿರುವ ಜೆಡಿಯು ಅಭ್ಯರ್ಥಿ ಅನಂತ್ ಕುಮಾರ್‌ ಸಿಂಗ್ 28,206 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 91,416 ಮತಗಳನ್ನು ಪಡೆದರೆ ಆರ್‌ಜೆಡಿಯ ವೀಣಾ ದೇವಿ ಅವರು 63,210 ಮತಗಳನ್ನು ಪಡೆದಿದ್ದಾರೆ.

ಜನ್ ಸುರಾಜ್ ಪಾರ್ಟಿ ಬೆಂಬಲಿಗನನ್ನು ಕೊಲೆಗೈದ ಪ್ರಕರಣದಲ್ಲಿ ಅನಂತ್ ಕುಮಾರ್‌ ಸಿಂಗ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. 2005 ರಲ್ಲಿ ಮೊದಲ ಚುನಾವಣೆ ಗೆದ್ದ ಬಳಿಕ ಇಲ್ಲಿಯವರೆಗೆ ಐದು ಬಾರಿ ಮೊಕಾಮಾದಿಂದ ಆಯ್ಕೆ ಆಗುತ್ತಲೇ ಬಂದಿದ್ದಾರೆ. 2010 ರಲ್ಲಿ ಅವರು ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ 2015 ರಲ್ಲಿ ಜೆಡಿಯು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದದ್ದರು. 2020 ರ ಚುನಾವಣೆಗೆ ಮೊದಲು ಅವರು ಆರ್‌ಜೆಡಿ ಸೇರಿದ್ದರು.

ಇದನ್ನು ಓದಿ: ಭಾರಿ ಜಯದತ್ತ ಎನ್‌ಡಿಎ ; ಬಿಜೆಪಿ ಅತಿ ದೊಡ್ಡ ಪಕ್ಷ

28 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರೂ, ಶಸ್ತ್ರಾಸ್ತ್ರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಸಿಂಗ್ 2022 ರಲ್ಲಿ ತಮ್ಮ ವಿಧಾನಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ನೀಲಂ ದೇವಿ ಸ್ಪರ್ಧಿಸಿ ಜಯಗಳಿಸಿದ್ದರು. ನವೆಂಬರ್ 2 ರಂದು ಜನ ಸುರಾಜ್‌ ಅಭ್ಯರ್ಥಿ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದ ದರೋಡೆಕೋರ, ರಾಜಕಾರಣಿ ದುಲಾರ್ ಸಿಂಗ್ ಯಾದವ್ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಅನಂತ್ ಕುಮಾರ್‌ ಸಿಂಗ್ ಅವರನ್ನು ಬಂಧಿಸಿದ್ದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

24 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago