Supreme Court
ಹೊಸದಿಲ್ಲಿ : ಮತದಾರರ ಪಟ್ಟಿ ಕರಡು ಪರಿಷ್ಕರಣೆ ವೇಳೆ ಮತದಾರರು ಸಲ್ಲಿಸಬೇಕಾಗಿದ್ದ 7 ದಾಖಲೆಗಳಿಗಿಂತ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಸಲ್ಲಿಸಬೇಕಾಗಿರುವ 11 ದಾಖಲೆಗಳು ಮತದಾರರ ಸ್ನೇಹಿ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ಜೂ.24ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಬುಧವಾರ ಮುಂದುವರಿಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠವು ಚುನಾವಣಾ ಆಯೋಗದ ದಾಖಲೆ ಪರಿಶೀಲನೆಯು ಮತದಾರರ ವಿರೋಧಿ ಮತ್ತು ಹೊರಗಿಡುವ ಕ್ರಮವಾಗಿದೆ ಎಂಬ ವಾದವನ್ನು ಒಪ್ಪಲಿಲ್ಲ.
ಆಧಾರ್ ಕಾರ್ಡ್ ಅನ್ನು ದಾಖಲೆಯಾಗಿ ಸ್ವೀಕರಸಿದಿರುವ ನಿರ್ಧಾರವು ಮತದಾರರ ಪಟ್ಟಿಯಿಂದ ನಾಗರಿಕರನ್ನು ಹೊಗಿಡುವ ಹುನ್ನಾರ ಎಂದು ಅರ್ಜಿದಾರರ ವಾದದ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯಲ್ಲಿ ದಾಖಲೆಗಳು ಇರುವುದು ನಿಜವಾಗಿಯೂ ನಾಗರಿಕನನ್ನು ಮತದಾರರ ಪಟ್ಟಿಗೆ ಒಳಗೊಳ್ಳಿಸುವ ಕ್ರಮ ಎಂದು ತೋರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಸಹ ನ್ಯಾಯಮೂರ್ತಿಗಳ ಅಭಿಪ್ರಾಯವನ್ನೇ ಪ್ರತಿಧ್ವನಿಸುತ್ತಾ ನ್ಯಾಯಮೂರ್ತಿ ಕಾಂತ್, ಅವರು ಎಲ್ಲಾ 11 ದಾಖಲೆಗಳನ್ನು ಕೇಳಿದರೆ, ಅದು ಮತದಾರರ ವಿರೋಧಿ. ಆದರೆ ಯಾವುದೇ ಒಂದು ದಾಖಲೆಯನ್ನು ಕೇಳಿದರೆ, ಅದು ಹೇಗೆ ವಿರೋಧಿಯಾಗುತ್ತದೆ ಎಂದು ಹೇಳಿದರು.
ಆಧಾರ್ ಅನ್ನು ಸ್ವೀಕರಿಸದಿರುವುದು ಅನ್ಯಾಯ ಎಂಬ ಅರ್ಜಿದಾರರ ವಾದದ ಹೊರತಾಗಿಯೂ, ಇತರ ದಾಖಲೆಗಳ ಆಯ್ಕೆಗಳನ್ನು ಕೂಡ ನೀಡಲಾಗಿದೆ ಎಂದು ಪೀಠವು ಹೇಳಿದೆ. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಇದಕ್ಕೆ ಒಪ್ಪಲಿಲ್ಲ. ದಾಖಲೆಗಳ ಸಂಖ್ಯೆ ಹೆಚ್ಚಿದ್ದರೂ, ಅವುಗಳ ವ್ಯಾಪ್ತಿ ಅತ್ಯಂತ ಕಡಿಮೆ ಎಂದು ಅವರು ಹೇಳಿದರು. ಮತದಾರರೊಂದಿಗೆ ಪಾಸ್ಪೋರ್ಟ್ಗಳ ಲಭ್ಯತೆಯ ಉದಾಹರಣೆಯನ್ನು ಅವರು ನೀಡಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…