Supreme Court
ಹೊಸದಿಲ್ಲಿ : ಮತದಾರರ ಪಟ್ಟಿ ಕರಡು ಪರಿಷ್ಕರಣೆ ವೇಳೆ ಮತದಾರರು ಸಲ್ಲಿಸಬೇಕಾಗಿದ್ದ 7 ದಾಖಲೆಗಳಿಗಿಂತ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಸಲ್ಲಿಸಬೇಕಾಗಿರುವ 11 ದಾಖಲೆಗಳು ಮತದಾರರ ಸ್ನೇಹಿ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ಜೂ.24ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಬುಧವಾರ ಮುಂದುವರಿಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠವು ಚುನಾವಣಾ ಆಯೋಗದ ದಾಖಲೆ ಪರಿಶೀಲನೆಯು ಮತದಾರರ ವಿರೋಧಿ ಮತ್ತು ಹೊರಗಿಡುವ ಕ್ರಮವಾಗಿದೆ ಎಂಬ ವಾದವನ್ನು ಒಪ್ಪಲಿಲ್ಲ.
ಆಧಾರ್ ಕಾರ್ಡ್ ಅನ್ನು ದಾಖಲೆಯಾಗಿ ಸ್ವೀಕರಸಿದಿರುವ ನಿರ್ಧಾರವು ಮತದಾರರ ಪಟ್ಟಿಯಿಂದ ನಾಗರಿಕರನ್ನು ಹೊಗಿಡುವ ಹುನ್ನಾರ ಎಂದು ಅರ್ಜಿದಾರರ ವಾದದ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯಲ್ಲಿ ದಾಖಲೆಗಳು ಇರುವುದು ನಿಜವಾಗಿಯೂ ನಾಗರಿಕನನ್ನು ಮತದಾರರ ಪಟ್ಟಿಗೆ ಒಳಗೊಳ್ಳಿಸುವ ಕ್ರಮ ಎಂದು ತೋರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಸಹ ನ್ಯಾಯಮೂರ್ತಿಗಳ ಅಭಿಪ್ರಾಯವನ್ನೇ ಪ್ರತಿಧ್ವನಿಸುತ್ತಾ ನ್ಯಾಯಮೂರ್ತಿ ಕಾಂತ್, ಅವರು ಎಲ್ಲಾ 11 ದಾಖಲೆಗಳನ್ನು ಕೇಳಿದರೆ, ಅದು ಮತದಾರರ ವಿರೋಧಿ. ಆದರೆ ಯಾವುದೇ ಒಂದು ದಾಖಲೆಯನ್ನು ಕೇಳಿದರೆ, ಅದು ಹೇಗೆ ವಿರೋಧಿಯಾಗುತ್ತದೆ ಎಂದು ಹೇಳಿದರು.
ಆಧಾರ್ ಅನ್ನು ಸ್ವೀಕರಿಸದಿರುವುದು ಅನ್ಯಾಯ ಎಂಬ ಅರ್ಜಿದಾರರ ವಾದದ ಹೊರತಾಗಿಯೂ, ಇತರ ದಾಖಲೆಗಳ ಆಯ್ಕೆಗಳನ್ನು ಕೂಡ ನೀಡಲಾಗಿದೆ ಎಂದು ಪೀಠವು ಹೇಳಿದೆ. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಇದಕ್ಕೆ ಒಪ್ಪಲಿಲ್ಲ. ದಾಖಲೆಗಳ ಸಂಖ್ಯೆ ಹೆಚ್ಚಿದ್ದರೂ, ಅವುಗಳ ವ್ಯಾಪ್ತಿ ಅತ್ಯಂತ ಕಡಿಮೆ ಎಂದು ಅವರು ಹೇಳಿದರು. ಮತದಾರರೊಂದಿಗೆ ಪಾಸ್ಪೋರ್ಟ್ಗಳ ಲಭ್ಯತೆಯ ಉದಾಹರಣೆಯನ್ನು ಅವರು ನೀಡಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…