narendra modi
ಬೀಜಿಂಗ್: ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚೀನಾದ ಟಯಾಂಜಿನ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಕಳೆದ ವರ್ಷ ರಷ್ಯಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಸ್ತಾಪಿಸಿದ ನರೇಂದ್ರ ಮೋದಿ ಅವರು, ಕಜಾನ್ನಲ್ಲಿ ನಾವು ಬಹಳ ಫಲಪ್ರದ ಚರ್ಚೆಗಳನ್ನು ನಡೆಸಿದ್ದೇವೆ. ಇದು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ನಿರ್ದೇಶನವನ್ನು ನೀಡಿತು. ಗಡಿಯಲ್ಲಿ ಸೇನೆಯನ್ನು ಪರಸ್ಪರ ಹಿಂದಕ್ಕೆ ಪಡೆದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.
ಭಾರತ ಹಾಗೂ ಚೀನಾದಲ್ಲಿರುವ 2.8 ಬಿಲಿಯನ್ ಜನರ ಯೋಗಕ್ಷೇಮವು ನಮ್ಮ ದೇಶಗಳ ನಡುವಿನ ಸಹಕಾರವನ್ನು ಅವಲಂಬಿಸಿದೆ. ಪರಸ್ಪರ ಗೌರವ, ವಿಶ್ವಾಸ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ನಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ಗೆ ಹೇಳಿದರು.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮಾತನಾಡಿ, ಜಗತ್ತು ಪರಿವರ್ತನೆಯತ್ತ ಸಾಗುತ್ತಿದೆ. ಚೀನಾ ಮತ್ತು ಭಾರತ ಎರಡು ಅತ್ಯಂತ ನಾಗರಿಕ ರಾಷ್ಟ್ರಗಳಾಗಿವೆ. ನಾವು ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಾಗಿದ್ದೇವೆ. ಸ್ನೇಹಿತರಾಗಿ ಒಳ್ಳೆಯ ನೆರೆಹೊರೆಯವರಾಗಿ ಇರಲ ಡ್ರ್ಯಾಗನ್ ಮತ್ತು ಆನೆ ಒಟ್ಟಿಗೆ ಬರುವುದು ಅತ್ಯಗತ್ಯ ಎಂದು ತಿಳಿಸಿದರು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…