ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ.
49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. ರಾಜೇಶ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಲು ನೂರಾರು ಪಕ್ಷದ ಕಾರ್ಯಕರ್ತರು ಕಾರ್ಪೊರೇಷನ್ ಹಾಲ್ ಮತ್ತು ಅದರ ಆವರಣದಲ್ಲಿ ಜಮಾಯಿಸಿದ್ದರು. ಬಿಜೆಪಿಯ ಜಿ.ಎಸ್. ಅಶಾನಾಥ್ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಉಪ ಮೇಯರ್ ಆಗಿ ಆಯ್ಕೆಯಾದರು.
ಇದನ್ನು ಓದಿ: ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಅವರ ಬೆಂಬಲವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಇದರೊಂದಿಗೆ ಸರಳ ಬಹುಮತ ಪಡೆಯಿತು.
ಎಲ್ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದವು. ಹಿಂದಿನ ಕೌನ್ಸಿಲ್ನಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ವಿಳಿಂಜಮ್ ವಾರ್ಡ್ನ ಸ್ವತಂತ್ರ ಅಭ್ಯರ್ಥಿಯ ಮರಣದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು.
ಪ್ರಮಾಣವಚನ ಸಮಾರಂಭದಲ್ಲಿ ಪಕ್ಷದ ವಿವಿಧ ನಾಯಕರು ,ಬಿಜೆಪಿಯ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.
ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…