ದೇಶ- ವಿದೇಶ

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ.

49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. ರಾಜೇಶ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಲು ನೂರಾರು ಪಕ್ಷದ ಕಾರ್ಯಕರ್ತರು ಕಾರ್ಪೊರೇಷನ್ ಹಾಲ್ ಮತ್ತು ಅದರ ಆವರಣದಲ್ಲಿ ಜಮಾಯಿಸಿದ್ದರು. ಬಿಜೆಪಿಯ ಜಿ.ಎಸ್. ಅಶಾನಾಥ್ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಉಪ ಮೇಯರ್ ಆಗಿ ಆಯ್ಕೆಯಾದರು.

ಇದನ್ನು ಓದಿ: ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್‌ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಅವರ ಬೆಂಬಲವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಇದರೊಂದಿಗೆ ಸರಳ ಬಹುಮತ ಪಡೆಯಿತು.

ಎಲ್‌ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದವು. ಹಿಂದಿನ ಕೌನ್ಸಿಲ್‌ನಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ವಿಳಿಂಜಮ್ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿಯ ಮರಣದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು.

ಪ್ರಮಾಣವಚನ ಸಮಾರಂಭದಲ್ಲಿ ಪಕ್ಷದ ವಿವಿಧ ನಾಯಕರು ,ಬಿಜೆಪಿಯ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.

ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

9 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago