ದೇಶ- ವಿದೇಶ

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ.

49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. ರಾಜೇಶ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಲು ನೂರಾರು ಪಕ್ಷದ ಕಾರ್ಯಕರ್ತರು ಕಾರ್ಪೊರೇಷನ್ ಹಾಲ್ ಮತ್ತು ಅದರ ಆವರಣದಲ್ಲಿ ಜಮಾಯಿಸಿದ್ದರು. ಬಿಜೆಪಿಯ ಜಿ.ಎಸ್. ಅಶಾನಾಥ್ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಉಪ ಮೇಯರ್ ಆಗಿ ಆಯ್ಕೆಯಾದರು.

ಇದನ್ನು ಓದಿ: ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್‌ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಅವರ ಬೆಂಬಲವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಇದರೊಂದಿಗೆ ಸರಳ ಬಹುಮತ ಪಡೆಯಿತು.

ಎಲ್‌ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದವು. ಹಿಂದಿನ ಕೌನ್ಸಿಲ್‌ನಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ವಿಳಿಂಜಮ್ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿಯ ಮರಣದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು.

ಪ್ರಮಾಣವಚನ ಸಮಾರಂಭದಲ್ಲಿ ಪಕ್ಷದ ವಿವಿಧ ನಾಯಕರು ,ಬಿಜೆಪಿಯ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.

ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

6 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

19 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

19 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

19 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

19 hours ago