ನವದೆಹಲಿ: ಎಎಪಿ ಪಕ್ಷವನ್ನು ಗುರಿಯಾಗಿಸಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಗೂಂಡಾಗಿರಿ ನಡೆಸುತ್ತಿದೆ ಎಂದು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಇಂದು (ಫೆ.3) ಚುನಾವಣಾ ಪ್ರಚಾರ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ರೂ. 25,000 ಹಣ ಉಳಿಸುತ್ತಿದೆ. ಇನ್ನೊಂದು ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ ಎಂದು ಬಿಜೆಪಿ ಪಕ್ಷವನ್ನು ಗುರಿಯಾಗಿಸಿ ಹೇಳಿದ್ದಾರೆ.
ಈ ದೇಶದ ಕಾನೂನಿಗೂ ಹೆದರದೆ, ದೆಹಲಿ ಪೊಲೀಸರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವವರು ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುವ ಗೂಂಡಾ ಯಾರು? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, ತಮ್ಮ ವೈಯುಕ್ತಿಕ ಲಾಭಕ್ಕಾಗಿ ಪ್ರಜಾಪ್ರಭತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಜನರ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…