ದೇಶ- ವಿದೇಶ

ದುರ್ಬಲ ವರ್ಗಗಳ ಆಕಾಂಕ್ಷೆಯನ್ನು ಬಿಜೆಪಿ ಆಣಕಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದಲ್ಲಿರುವ ದುರ್ಬಲ ವರ್ಗದ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಂಡಿದೆ. ಅವರ ಆಕಾಂಕ್ಷೆಗಳನ್ನು ಅಣಕಿಸುತ್ತಿದೆ ಎಂದು ಹೇಳಿದ್ದಾರೆ.

ದೇಶದ ದುರ್ಬಲ ವರ್ಗದ ವಿದ್ಯಾರ್ಥಿಗಳು ಅವಕಾಶಗಳನ್ನು ಪಡೆಯದ ಹೊರತು, ಅವರ ಕೌಶಲ್ಯಗಳನ್ನು ಪ್ರೋತ್ಸಾಹಿಸದ ಹೊರತು, ನಾವು ಅವರಿಗೆ ಹೇಗೆ ಉದ್ಯೋಗಗಳನ್ನು ಕೊಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲಾ ವಿದ್ಯಾರ್ಥಿವೇತನದ ವಿದ್ಯಾಥಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಇಳಿಸಿರುವುದು ಅಲ್ಲದೇ, ವರ್ಷದಿಂದ ವರ್ಷಕ್ಕೆ ಶೇ 25ರಷ್ಟು ಕಡಿಮೆ ಹಣವನ್ನು ಖರ್ಚು ಮಾಡಿದೆ ಎಂದು ಅಂಕಿ ಅಂಶ ತೋರಿಸುತ್ತಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಇಟಿ:ಜನಿವಾರ ತೆಗೆಸಿದ್ದು ಖಂಡನೀಯ

ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ಪರೀಕ್ಷಾರ್ಥಿ ಜನಿವಾರ ತೆಗೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ತನೆ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ.…

6 mins ago

ಓದುಗರ ಪತ್ರ: ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ

ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು…

13 mins ago

ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ

ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು…

26 mins ago

ಉತ್ತಮವೆನ್ನಬಹುದಾದ ಮಳೆಗಾಲ; ರೈತರಿಗೆ ಸಿಹಿ ಸುದ್ದಿ

ಪ್ರೊ.ಆರ್.ಎಂ.ಚಿಂತಾಮಣಿ ದೇಶಾದ್ಯಂತ ಸುಡುವ ಬೇಸಿಗೆಯ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದಾರೆ. ಆಗಾಗ ಬೀಸುವ ಬಿಸಿಗಾಳಿಯ ಹೊಡೆತ ಬೇರೆ, ಕೆಲವು ಕಡೆ…

46 mins ago

ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು

ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ…

53 mins ago

ಏ.೨೮ರಂದು ಮಡಿಕೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ

ಅಧ್ಯಕ್ಷ ಸ್ಥಾನಕ್ಕೆ ೯ ಮಂದಿ ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ನವೀನ್ ಡಿಸೋಜ ಮಡಿಕೇರಿ: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ…

3 hours ago