ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದಲ್ಲಿರುವ ದುರ್ಬಲ ವರ್ಗದ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಂಡಿದೆ. ಅವರ ಆಕಾಂಕ್ಷೆಗಳನ್ನು ಅಣಕಿಸುತ್ತಿದೆ ಎಂದು ಹೇಳಿದ್ದಾರೆ.
ದೇಶದ ದುರ್ಬಲ ವರ್ಗದ ವಿದ್ಯಾರ್ಥಿಗಳು ಅವಕಾಶಗಳನ್ನು ಪಡೆಯದ ಹೊರತು, ಅವರ ಕೌಶಲ್ಯಗಳನ್ನು ಪ್ರೋತ್ಸಾಹಿಸದ ಹೊರತು, ನಾವು ಅವರಿಗೆ ಹೇಗೆ ಉದ್ಯೋಗಗಳನ್ನು ಕೊಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲಾ ವಿದ್ಯಾರ್ಥಿವೇತನದ ವಿದ್ಯಾಥಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಇಳಿಸಿರುವುದು ಅಲ್ಲದೇ, ವರ್ಷದಿಂದ ವರ್ಷಕ್ಕೆ ಶೇ 25ರಷ್ಟು ಕಡಿಮೆ ಹಣವನ್ನು ಖರ್ಚು ಮಾಡಿದೆ ಎಂದು ಅಂಕಿ ಅಂಶ ತೋರಿಸುತ್ತಿದೆ ಎಂದು ಖರ್ಗೆ ಪೋಸ್ಟ್ನಲ್ಲಿ ಆರೋಪಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…