ದೇಶ- ವಿದೇಶ

ದುರ್ಬಲ ವರ್ಗಗಳ ಆಕಾಂಕ್ಷೆಯನ್ನು ಬಿಜೆಪಿ ಆಣಕಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದಲ್ಲಿರುವ ದುರ್ಬಲ ವರ್ಗದ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಂಡಿದೆ. ಅವರ ಆಕಾಂಕ್ಷೆಗಳನ್ನು ಅಣಕಿಸುತ್ತಿದೆ ಎಂದು ಹೇಳಿದ್ದಾರೆ.

ದೇಶದ ದುರ್ಬಲ ವರ್ಗದ ವಿದ್ಯಾರ್ಥಿಗಳು ಅವಕಾಶಗಳನ್ನು ಪಡೆಯದ ಹೊರತು, ಅವರ ಕೌಶಲ್ಯಗಳನ್ನು ಪ್ರೋತ್ಸಾಹಿಸದ ಹೊರತು, ನಾವು ಅವರಿಗೆ ಹೇಗೆ ಉದ್ಯೋಗಗಳನ್ನು ಕೊಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲಾ ವಿದ್ಯಾರ್ಥಿವೇತನದ ವಿದ್ಯಾಥಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಇಳಿಸಿರುವುದು ಅಲ್ಲದೇ, ವರ್ಷದಿಂದ ವರ್ಷಕ್ಕೆ ಶೇ 25ರಷ್ಟು ಕಡಿಮೆ ಹಣವನ್ನು ಖರ್ಚು ಮಾಡಿದೆ ಎಂದು ಅಂಕಿ ಅಂಶ ತೋರಿಸುತ್ತಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

2 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

2 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

3 hours ago