ದೇಶ- ವಿದೇಶ

ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ: ಸಿದ್ದರಾಮಯ್ಯ ಆರೋಪ

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ

ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ

ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದ ರಾಹುಲ್‌ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಎಂದು ದೂರಿದರು.

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್  ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು.

ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.

 

ರಾಗಾ ವಿರುದ್ಧ ಜೀವ ಬೆದಿರಿಕೆ ಹಾಕಿರುವವರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಿ

ರಾಹುಲ್‌ ಗಾಂಧಿ ಅವರನ್ನು ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.‌ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.

ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಹೇಳಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 mins ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

31 mins ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

43 mins ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

60 mins ago

ಕರ್ತವ್ಯ ಮುಗಿಸಿ ಮನೆಗೆ ಬಂದಾಗಲೇ ಹೃದಯಾಘಾತ: ಎಎಸ್‌ಐ ಸಾವು

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

2 hours ago

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

2 hours ago