ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ
ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ ಬೆದರಿಕೆ ಹಾಕಿದೆ ಎಂದು ದೂರಿದರು.
ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ ಆಗ್ರಹಿಸಿದರು.
ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.
ರಾಗಾ ವಿರುದ್ಧ ಜೀವ ಬೆದಿರಿಕೆ ಹಾಕಿರುವವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ
ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು. ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…