ನವದೆಹಲಿ: ಆರ್ಎಸ್ಎಸ್ ಬಿಜೆಪಿಯ ಪಿತೃಪಕ್ಷ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದವರು, ಶೂದ್ರರನ್ನು ಎಂದೂ ಕೂಡ ಆರ್ಎಸ್ಎಸ್ ಗೌರವಿಸಲ್ಲ. ಹಿಂದುಳಿದವರನ್ನು ಶೂದ್ರರನ್ನು ಕಾಲಾಳುಗಳಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಬಿಸಿಗಳಿಗೆ ಅವಕಾಶ ಸಿಕ್ಕರೆ ಉನ್ನತ ಸ್ಥಾನಕ್ಕೆ ಹೋಗುತ್ತಾರೆ. ಹೀಗಾಗಿ ದುರುದ್ದೇಶದಿಂದ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿ ಬರೀ ಆರ್ಎಸ್ಎಸ್ ಉದ್ದೇಶವನ್ನು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.





