ದೇಶ- ವಿದೇಶ

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.

ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್‌ ಅವರು ಹೀನಾಯ ಸೋಲು ಕಂಡಿದ್ದಾರೆ.

1980ರ ದಶಕದಿಂದಲೂ ರಾಮ ಮಂದಿರ ಹೆಸರನ್ನು ಪ್ರಸ್ತಾಪಿಸಿ ಜನಾಂದೋಲನ ಮಾಡುತ್ತಾ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿತ್ತು. ಇದರ ಬೆನ್ನಲ್ಲೇ ಇದೇ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಸಹ ಉದ್ಘಾಟನೆ ಮಾಡಿದ್ದರು. ಇದು ಭಾರತೀಯರ ಅಸ್ಮಿತೆ, ಭಾರತೀಯರ ಶತಮಾನದ ಕನಸು ಎಂದೆಲ್ಲಾ ಘೋಷ ವಾಕ್ಯಗಳನ್ನು ಬೀರುತ್ತಾ ಅಧಿಕಾರ ನಡೆಸುತ್ತಿದ್ದ ಬಿಜೆಪಿಗೆ ರಾಮನ ಅಂಗಳದಲ್ಲಿಯೇ ಮುಖಭಂಗ ಉಂಟಾಗಿದೆ.

ಅವದೇಶ್‌ ಪ್ರಸಾದ್‌ ಅವರು 554289 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇತ್ತ ಇವರ ವಿರುದ್ಧ ಠೇವಣಿ ಕಳೆದುಕೊಂಡಿರುವ ಲಲ್ಲು ಸಿಂಗ್‌ 499722 ಮತ ಪಡೆದು 54567 ಮತಗಳ ಅಂತರಿದಂದ ಸೋಲು ಕಂಡಿದ್ದಾರೆ. ಆ ಮೂಲಕ ಈ ಬಾರಿ ಎಸ್‌ಪಿ ಪಕ್ಷಕ್ಕೆ ಬರೋಬ್ಬರಿ 38 ಕ್ಷೇತ್ರಗಳು ಕೈ ಹಿಡಿದಿವೆ. ಕಳೆದ ಬಾರಿಯ 2019 ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 71 ಕ್ಷೇತ್ರ ಗೆದ್ದುಬೀಗಿತ್ತು. ಆದರೆ ಈ ಬಾರಿ ಕೇವಲ 36 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

9 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago