ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.
ಸಮಾಜವಾದಿ ಪಾರ್ಟಿಯ ಅವದೇಶ್ ಪ್ರಸಾದ್ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್ ಅವರು ಹೀನಾಯ ಸೋಲು ಕಂಡಿದ್ದಾರೆ.
1980ರ ದಶಕದಿಂದಲೂ ರಾಮ ಮಂದಿರ ಹೆಸರನ್ನು ಪ್ರಸ್ತಾಪಿಸಿ ಜನಾಂದೋಲನ ಮಾಡುತ್ತಾ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿತ್ತು. ಇದರ ಬೆನ್ನಲ್ಲೇ ಇದೇ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಸಹ ಉದ್ಘಾಟನೆ ಮಾಡಿದ್ದರು. ಇದು ಭಾರತೀಯರ ಅಸ್ಮಿತೆ, ಭಾರತೀಯರ ಶತಮಾನದ ಕನಸು ಎಂದೆಲ್ಲಾ ಘೋಷ ವಾಕ್ಯಗಳನ್ನು ಬೀರುತ್ತಾ ಅಧಿಕಾರ ನಡೆಸುತ್ತಿದ್ದ ಬಿಜೆಪಿಗೆ ರಾಮನ ಅಂಗಳದಲ್ಲಿಯೇ ಮುಖಭಂಗ ಉಂಟಾಗಿದೆ.
ಅವದೇಶ್ ಪ್ರಸಾದ್ ಅವರು 554289 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇತ್ತ ಇವರ ವಿರುದ್ಧ ಠೇವಣಿ ಕಳೆದುಕೊಂಡಿರುವ ಲಲ್ಲು ಸಿಂಗ್ 499722 ಮತ ಪಡೆದು 54567 ಮತಗಳ ಅಂತರಿದಂದ ಸೋಲು ಕಂಡಿದ್ದಾರೆ. ಆ ಮೂಲಕ ಈ ಬಾರಿ ಎಸ್ಪಿ ಪಕ್ಷಕ್ಕೆ ಬರೋಬ್ಬರಿ 38 ಕ್ಷೇತ್ರಗಳು ಕೈ ಹಿಡಿದಿವೆ. ಕಳೆದ ಬಾರಿಯ 2019 ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 71 ಕ್ಷೇತ್ರ ಗೆದ್ದುಬೀಗಿತ್ತು. ಆದರೆ ಈ ಬಾರಿ ಕೇವಲ 36 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…