ದೇಶ- ವಿದೇಶ

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.

ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್‌ ಅವರು ಹೀನಾಯ ಸೋಲು ಕಂಡಿದ್ದಾರೆ.

1980ರ ದಶಕದಿಂದಲೂ ರಾಮ ಮಂದಿರ ಹೆಸರನ್ನು ಪ್ರಸ್ತಾಪಿಸಿ ಜನಾಂದೋಲನ ಮಾಡುತ್ತಾ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿತ್ತು. ಇದರ ಬೆನ್ನಲ್ಲೇ ಇದೇ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಸಹ ಉದ್ಘಾಟನೆ ಮಾಡಿದ್ದರು. ಇದು ಭಾರತೀಯರ ಅಸ್ಮಿತೆ, ಭಾರತೀಯರ ಶತಮಾನದ ಕನಸು ಎಂದೆಲ್ಲಾ ಘೋಷ ವಾಕ್ಯಗಳನ್ನು ಬೀರುತ್ತಾ ಅಧಿಕಾರ ನಡೆಸುತ್ತಿದ್ದ ಬಿಜೆಪಿಗೆ ರಾಮನ ಅಂಗಳದಲ್ಲಿಯೇ ಮುಖಭಂಗ ಉಂಟಾಗಿದೆ.

ಅವದೇಶ್‌ ಪ್ರಸಾದ್‌ ಅವರು 554289 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇತ್ತ ಇವರ ವಿರುದ್ಧ ಠೇವಣಿ ಕಳೆದುಕೊಂಡಿರುವ ಲಲ್ಲು ಸಿಂಗ್‌ 499722 ಮತ ಪಡೆದು 54567 ಮತಗಳ ಅಂತರಿದಂದ ಸೋಲು ಕಂಡಿದ್ದಾರೆ. ಆ ಮೂಲಕ ಈ ಬಾರಿ ಎಸ್‌ಪಿ ಪಕ್ಷಕ್ಕೆ ಬರೋಬ್ಬರಿ 38 ಕ್ಷೇತ್ರಗಳು ಕೈ ಹಿಡಿದಿವೆ. ಕಳೆದ ಬಾರಿಯ 2019 ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 71 ಕ್ಷೇತ್ರ ಗೆದ್ದುಬೀಗಿತ್ತು. ಆದರೆ ಈ ಬಾರಿ ಕೇವಲ 36 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎತ್ತು ಏರಿಗೆ, ಎಮ್ಮೆ ನೀರಿಗೆ… ಕೋಣ ನೀ ಮಾತ್ರ ಮೈಸೂರಿಗಾ?

ಅಕ್ಷತಾ ‘ಐಸ್ಸೀ ಇವುಗಳೂ ಸ್ಕೂಲಿಗೆ ರೆಡಿಯಾಗಿ ನಿಂತ್ಕೊಂಡವೆ. ಕರ್ಕೊಂಡು ಹೋದ್ರೆ ಹೆಂಗಿರತ್ತೆ?’ ಬೈಲಿನಲ್ಲಿ ಮೇಯುತ್ತಿರುವ ಕೋಣಗಳನ್ನು ಕಂಡು ಗುಂಪಿನ ಪೋಕ್ರಿ…

26 seconds ago

ಕಂಬಳದ ಕುರಿತು…

ಅಭ್ಯುದಯ ತುಳುನಾಡು ಕೃಷಿಯನ್ನು ಬಹುವಾಗಿ ಅವಲಂಬಿಸಿದೆ. ಪಶ್ಚಿಮ ಘಟ್ಟಗಳ ಸೆರಗಿನಿಂದ ಧುಮ್ಮಿಕ್ಕಿದ ನೀರು ಇನ್ನಷ್ಟು ಪಶ್ಚಿಮಕ್ಕೆ, ಅರಬ್ಬೀ ಸಮುದ್ರಕ್ಕೆ ಧಾವಿಸಲು…

6 mins ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

13 hours ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

22 hours ago