ದೇಶ- ವಿದೇಶ

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.

ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್‌ ಅವರು ಹೀನಾಯ ಸೋಲು ಕಂಡಿದ್ದಾರೆ.

1980ರ ದಶಕದಿಂದಲೂ ರಾಮ ಮಂದಿರ ಹೆಸರನ್ನು ಪ್ರಸ್ತಾಪಿಸಿ ಜನಾಂದೋಲನ ಮಾಡುತ್ತಾ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿತ್ತು. ಇದರ ಬೆನ್ನಲ್ಲೇ ಇದೇ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಸಹ ಉದ್ಘಾಟನೆ ಮಾಡಿದ್ದರು. ಇದು ಭಾರತೀಯರ ಅಸ್ಮಿತೆ, ಭಾರತೀಯರ ಶತಮಾನದ ಕನಸು ಎಂದೆಲ್ಲಾ ಘೋಷ ವಾಕ್ಯಗಳನ್ನು ಬೀರುತ್ತಾ ಅಧಿಕಾರ ನಡೆಸುತ್ತಿದ್ದ ಬಿಜೆಪಿಗೆ ರಾಮನ ಅಂಗಳದಲ್ಲಿಯೇ ಮುಖಭಂಗ ಉಂಟಾಗಿದೆ.

ಅವದೇಶ್‌ ಪ್ರಸಾದ್‌ ಅವರು 554289 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇತ್ತ ಇವರ ವಿರುದ್ಧ ಠೇವಣಿ ಕಳೆದುಕೊಂಡಿರುವ ಲಲ್ಲು ಸಿಂಗ್‌ 499722 ಮತ ಪಡೆದು 54567 ಮತಗಳ ಅಂತರಿದಂದ ಸೋಲು ಕಂಡಿದ್ದಾರೆ. ಆ ಮೂಲಕ ಈ ಬಾರಿ ಎಸ್‌ಪಿ ಪಕ್ಷಕ್ಕೆ ಬರೋಬ್ಬರಿ 38 ಕ್ಷೇತ್ರಗಳು ಕೈ ಹಿಡಿದಿವೆ. ಕಳೆದ ಬಾರಿಯ 2019 ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 71 ಕ್ಷೇತ್ರ ಗೆದ್ದುಬೀಗಿತ್ತು. ಆದರೆ ಈ ಬಾರಿ ಕೇವಲ 36 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

2 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

8 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

8 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

8 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

8 hours ago