BJP National President will be announced on July 7th
ನವದೆಹಲಿ: ಕಳೆದ ಹಲವಾರು ತಿಂಗಳಿನಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ.7ರೊಳಗೆ ಅಂತಿಮ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಎಂಟು ಕೇಂದ್ರ ಸಚಿವರು ಮತ್ತು ಇತರ ಮೂವರ ನಾಯಕರು ಹೆಸರು ಕೇಳಿ ಬರುತ್ತಿದ್ದರೂ, ಅದರಲ್ಲಿ ಎಂಟು ಮುಖಂಡರು ಮಾತ್ರ ರೇಸಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರೂ, ಸದ್ಯ ಕೇಳಿಬರುತ್ತಿರುವ ಸಂಭಾವ್ಯರ ಹೆಸರಿನಲ್ಲಿದೆ. ಬಿಜೆಪಿಯ ದೆಹಲಿ ನಾಯಕರು ಮತ್ತು ಸಂಘ ಪರಿವಾರದ ಜೊತೆಗೆ, ಜೋಶಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.
ಕಳೆದ ದೆಹಲಿ ವಿಧಾನಸಭಾ ಚುನಾವಣೆಯ ವೇಳೆ ಹಲವು ಹೆಸರು ಕೇಳಿಬರುತ್ತಿತ್ತು. ಆದರೆ, ಬಿಜೆಪಿ ವರಿಷ್ಠರು ಅಚ್ಚರಿಯಾಗಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದರು. ಅದೇ ರೀತಿ ರಾಷ್ಟ್ರಾಧ್ಯಕ್ಷ ಹುದ್ದೆಗೂ ಮಹಿಳೆಯ ಹೆಸರನ್ನು ಫೈನಲ್ ಮಾಡಿದರೂ ಮಾಡಬಹುದು. ಹಾಗಾಗಿ, ಇಬ್ಬರು ಮಹಿಳೆಯರ ಹೆಸರು ಸಹ ಕೇಳಿ ಬರುತ್ತಿದೆ.
ಒಟ್ಟಾರೆಯಾಗಿ ಹನ್ನೊಂದು ಸಂಭಾವ್ಯರ ಹೆಸರು ಪಟ್ಟಿಯಲ್ಲಿದ್ದು, ಅದರಲ್ಲಿ ಮೊದಲ ಎಂಟು ನಾಯಕರು ಪ್ರಮುಖವಾಗಿ ರೇಸಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…