ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಶ್ರೇಷ್ಠ ವ್ಯಕ್ತಿಗಳನ್ನು ಕಳೆದುಕೊಂಡಿದ್ದೇವೆ. ಎಲ್ಲರೂ ದುಃಖದಲ್ಲಿರುವಾಗ ರಾಹುಲ್ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ. ಸಿಂಗ್ ಅವರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸ್ಮಾರಕ ಮಾಡುವುದಕ್ಕೆ ಕೆಲವು ಕಾರ್ಯವಿಧಾನಗಳಿವೆ. ಆದ್ರೆ ಅಂತ್ಯಕ್ರಿಯೆಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…