ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಶ್ರೇಷ್ಠ ವ್ಯಕ್ತಿಗಳನ್ನು ಕಳೆದುಕೊಂಡಿದ್ದೇವೆ. ಎಲ್ಲರೂ ದುಃಖದಲ್ಲಿರುವಾಗ ರಾಹುಲ್ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ. ಸಿಂಗ್ ಅವರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸ್ಮಾರಕ ಮಾಡುವುದಕ್ಕೆ ಕೆಲವು ಕಾರ್ಯವಿಧಾನಗಳಿವೆ. ಆದ್ರೆ ಅಂತ್ಯಕ್ರಿಯೆಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…
ಗಾಂಧಿ ಅಭಿಯಾನ ಅರಿವಿನ ಯಾನ ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…