ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಶ್ರೇಷ್ಠ ವ್ಯಕ್ತಿಗಳನ್ನು ಕಳೆದುಕೊಂಡಿದ್ದೇವೆ. ಎಲ್ಲರೂ ದುಃಖದಲ್ಲಿರುವಾಗ ರಾಹುಲ್ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ. ಸಿಂಗ್ ಅವರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸ್ಮಾರಕ ಮಾಡುವುದಕ್ಕೆ ಕೆಲವು ಕಾರ್ಯವಿಧಾನಗಳಿವೆ. ಆದ್ರೆ ಅಂತ್ಯಕ್ರಿಯೆಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…