ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ.
ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಚುನಾವಣೆಯಲ್ಲಿ ಮೈತ್ರಿಕೂಟ ಗೆದ್ದರೆ ವಿಜಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿದೆ.
ಜೊತೆಗೆ ಸೀಟು ಹಂಚಿಕೆಯಲ್ಲೂ 80 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಮಾತುಕತೆ ಸಹ ಅಂತಿಮ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ತಮಿಳುನಾಡು ರಾಜಕೀಯ ಲೆಕ್ಕಚಾರವೇ ಬದಲಾಗಬಹುದು ಎಂದು ಹೇಳಲಾಗುತ್ತಿದೆ.
ಆದರೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯ ತಾವೂ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…