ಪಾಕ್‌ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದು ಬಿಜೆಪಿ ಬಯಕೆ: ಕಂಗನಾ ರಣಾವತ್‌

ಹೊಸದಿಲ್ಲಿ: ಪಾಕ್‌ ಆಕ್ರಮಿಸಿ ಪ್ರದೇಶವಾದ ಕಾಶ್ಮೀರವನ್ನು ಮರಳಿ ಪಡೆಯುವುದು ಬಿಜೆಪಿಯ ಬಯಕೆಯಾಗಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಬಳಿಕ ʻಬಟೇಂಗೆ ತೊ ಕಟೆಂಗೆʼ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗಿ ಅವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ.  ಇದು ದೇಶದ ಒಗ್ಗಟ್ಟಿನ ಕರೆಯಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆಂಬುದನ್ನು ನಮಗೆ ಬಾಲ್ಯದಿಂದಲೂ ಕಲಿಸಲಾಗಿದೆ. ನಾವು ಒಗ್ಗಟ್ಟಾಗಿದ್ದರೆ ನಮ್ಮ ದೇಶ ಸುರಕ್ಷಿತವಾಗಿರಲಿದೆ ಎಂದಿದ್ದಾರೆ.

ದೇಶ ವಿಭಜನೆಯಾದರೆ ತುಂಡರಿಸಿ ಹೋಗುತ್ತದೆ. ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನೂ ಮರಳಿ ಪಡೆಯಬೇಕೆಂದು ನಮ್ಮ ಸನಾತನ ಪಕ್ಷ ಬಯಸುತ್ತಿದೆ. ಹೀಗಾಗಿ ವಿಭಜನೆ ಮಾಡುವ ವಿರೋಧ ಪಕ್ಷಗಳ ಪಿತೂರಿಯು ವಿಫಲವಾಗಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಯೋಗಿ ಆದಿತ್ಯನಾಥ್‌ ಅವರು ದೇಶದ ಒಗ್ಗಟ್ಟಿಗೆ ಕರೆ ನೀಡಿದ್ದರು. ನಮ್ಮ ಒಡಕಿನಿಂದಲೇ ರಾಮಮಂದಿರ ಧ್ವಂಸಗೊಳಿಸಿದ್ದರು ಎಂದು ಪ್ರತಿಪಾದಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

1 hour ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

1 hour ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

1 hour ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

1 hour ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago