ಹೊಸದಿಲ್ಲಿ: ಪಾಕ್ ಆಕ್ರಮಿಸಿ ಪ್ರದೇಶವಾದ ಕಾಶ್ಮೀರವನ್ನು ಮರಳಿ ಪಡೆಯುವುದು ಬಿಜೆಪಿಯ ಬಯಕೆಯಾಗಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಬಳಿಕ ʻಬಟೇಂಗೆ ತೊ ಕಟೆಂಗೆʼ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗಿ ಅವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ. ಇದು ದೇಶದ ಒಗ್ಗಟ್ಟಿನ ಕರೆಯಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆಂಬುದನ್ನು ನಮಗೆ ಬಾಲ್ಯದಿಂದಲೂ ಕಲಿಸಲಾಗಿದೆ. ನಾವು ಒಗ್ಗಟ್ಟಾಗಿದ್ದರೆ ನಮ್ಮ ದೇಶ ಸುರಕ್ಷಿತವಾಗಿರಲಿದೆ ಎಂದಿದ್ದಾರೆ.
ದೇಶ ವಿಭಜನೆಯಾದರೆ ತುಂಡರಿಸಿ ಹೋಗುತ್ತದೆ. ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನೂ ಮರಳಿ ಪಡೆಯಬೇಕೆಂದು ನಮ್ಮ ಸನಾತನ ಪಕ್ಷ ಬಯಸುತ್ತಿದೆ. ಹೀಗಾಗಿ ವಿಭಜನೆ ಮಾಡುವ ವಿರೋಧ ಪಕ್ಷಗಳ ಪಿತೂರಿಯು ವಿಫಲವಾಗಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಯೋಗಿ ಆದಿತ್ಯನಾಥ್ ಅವರು ದೇಶದ ಒಗ್ಗಟ್ಟಿಗೆ ಕರೆ ನೀಡಿದ್ದರು. ನಮ್ಮ ಒಡಕಿನಿಂದಲೇ ರಾಮಮಂದಿರ ಧ್ವಂಸಗೊಳಿಸಿದ್ದರು ಎಂದು ಪ್ರತಿಪಾದಿಸಿದ್ದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…