ದೇಶ- ವಿದೇಶ

ಬಿಜೆಪಿ ದೇಶದ ಧ್ವಜವನ್ನು ಬದಲಾಯಿಸುತ್ತಾರೆ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಮತ್ತು ಧ್ವಜವನ್ನು ಕಿತ್ತುಕೊಂಡಂತೆ ಅವರು (ಬಿಜೆಪಿ) ಈ ದೇಶದ ಧ್ವಜವನ್ನು ಬದಲಾಯಿಸುತ್ತಾರೆ  ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಜೆಪಿ ದೇಶದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಮ್ಮ ಧ್ವಜ ಮತ್ತು ಸಂವಿಧಾನವನ್ನು ಹಿಂಪಡೆಯುತ್ತೇವೆ ಎಂದು ಪ್ರಮಾಣ ಮಾಡಿದ್ದೇವೆ. ಲಕ್ಷಗಟ್ಟಲೆ ಜನರು ಪ್ರಾಣ ತ್ಯಾಗ ಮಾಡಿದ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಮುಂಬರುವ ದಿನಗಳಲ್ಲಿ ಬಿಜೆಪಿಯು ಭಾರತ ದೇಶವನ್ನು ನಿರ್ಮಿಸಿರುವ ಸಂವಿಧಾನದ ತಳಹದಿಯನ್ನು ಮತ್ತು ಅದರ ಜಾತ್ಯತೀತತೆಯನ್ನು ನಾಶಪಡಿಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಇದನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಬಯಸುತ್ತಿದೆ. ಜನರು ಇಂದು ಹೆಮ್ಮೆಯಿಂದ ಹಾರಿಸುತ್ತಿರುವ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸುತ್ತಿದೆ ಎಂದು ಕಿಡಿಕಾರಿದರು.

2019 ಆಗಸ್ಟ್‌ 5 ರಾಜ್ಯದ ಪಾಲಿಗೆ ಕಪ್ಪು ದಿನ ಎಂದು ಹೇಳಿದ್ದಾರೆ. ಆ ದಿನ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಶ್ರೀನಗರದಲ್ಲಿ ಶುಕ್ರವಾರ ಈ ಕುರಿತಾಗಿ ಪ್ರತಿಭಟನೆ ನಡೆಸಿದ ಪಿಡಿಪಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗಿತು. ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಮೆಹಬೂಬಾ ಮುಫ್ತಿ, ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 370ನೇ ವಿಧಿಯನ್ನು ರದ್ದು ಮಾಡಿದ್ದು ಸರ್ಕಾರದ ಕಪ್ಪು ನಿರ್ಧಾರ ಎಂದು ಟೀಕೆ ಮಾಡಿದರು. ಮೂರು ವರ್ಷದ ಹಿಂದೆ ಮೋದಿ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ತೀರ್ಮಾನ ಮಾಡಿತ್ತು. ಅದರೊಂದಿಗೆ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡುವ ನಿರ್ಧಾರವನ್ನು  ಮಾಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎನ್ನುವ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಪ್ರಸ್ತುತ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಅಲ್ಲಿನ ರಾಜ್ಯಾಧಿಕಾರವನ್ನು ವಾಪಾಸ್‌ ನೀಡುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವಿದೆ.

ತಮ್ಮ ಕೈಯಲ್ಲಿ ಬ್ಯಾನರ್‌ ಹಿಡಿದುಕೊಂಡು ಪ್ರತಿಭಟನೆಯಲ್ಲಿ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ಅವರು ಹಿಡಿದಿದ್ದ ಬ್ಯಾನರ್‌ನಲ್ಲಿ, ‘ಕಾಲೆ ದಿನ್‌ ಕಾ ಕಾಲಾ ನಿಶ್ಚಯ್‌ ನಹೀ ಚಲೇಗಾ, ಸಾಲ್ವ್‌ ದ ಕಾಶ್ಮೀರ್‌ ಇಶ್ಯೂ’ ಎಂದು ಬರೆಯಲಾಗಿತ್ತು. ಅದರರ್ಥ, ಕಪ್ಪು ದಿನದ ಕಪ್ಪು ನಿರ್ಣಯ ನಡೆಯೋದಿಲ್ಲ. ಮೊದಲು ಕಾಶ್ಮೀರ ಸಮಸ್ಯೆ ಬಗೆಹರಿಸಿ ಎನ್ನುವುದಾಗಿತ್ತು.

 

 

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

4 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

8 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

8 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

9 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

9 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

9 hours ago