ದೇಶ- ವಿದೇಶ

ಬಿಜೆಪಿ ದೇಶದ ಧ್ವಜವನ್ನು ಬದಲಾಯಿಸುತ್ತಾರೆ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಮತ್ತು ಧ್ವಜವನ್ನು ಕಿತ್ತುಕೊಂಡಂತೆ ಅವರು (ಬಿಜೆಪಿ) ಈ ದೇಶದ ಧ್ವಜವನ್ನು ಬದಲಾಯಿಸುತ್ತಾರೆ  ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಜೆಪಿ ದೇಶದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಮ್ಮ ಧ್ವಜ ಮತ್ತು ಸಂವಿಧಾನವನ್ನು ಹಿಂಪಡೆಯುತ್ತೇವೆ ಎಂದು ಪ್ರಮಾಣ ಮಾಡಿದ್ದೇವೆ. ಲಕ್ಷಗಟ್ಟಲೆ ಜನರು ಪ್ರಾಣ ತ್ಯಾಗ ಮಾಡಿದ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಮುಂಬರುವ ದಿನಗಳಲ್ಲಿ ಬಿಜೆಪಿಯು ಭಾರತ ದೇಶವನ್ನು ನಿರ್ಮಿಸಿರುವ ಸಂವಿಧಾನದ ತಳಹದಿಯನ್ನು ಮತ್ತು ಅದರ ಜಾತ್ಯತೀತತೆಯನ್ನು ನಾಶಪಡಿಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಇದನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಬಯಸುತ್ತಿದೆ. ಜನರು ಇಂದು ಹೆಮ್ಮೆಯಿಂದ ಹಾರಿಸುತ್ತಿರುವ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸುತ್ತಿದೆ ಎಂದು ಕಿಡಿಕಾರಿದರು.

2019 ಆಗಸ್ಟ್‌ 5 ರಾಜ್ಯದ ಪಾಲಿಗೆ ಕಪ್ಪು ದಿನ ಎಂದು ಹೇಳಿದ್ದಾರೆ. ಆ ದಿನ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಶ್ರೀನಗರದಲ್ಲಿ ಶುಕ್ರವಾರ ಈ ಕುರಿತಾಗಿ ಪ್ರತಿಭಟನೆ ನಡೆಸಿದ ಪಿಡಿಪಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗಿತು. ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಮೆಹಬೂಬಾ ಮುಫ್ತಿ, ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 370ನೇ ವಿಧಿಯನ್ನು ರದ್ದು ಮಾಡಿದ್ದು ಸರ್ಕಾರದ ಕಪ್ಪು ನಿರ್ಧಾರ ಎಂದು ಟೀಕೆ ಮಾಡಿದರು. ಮೂರು ವರ್ಷದ ಹಿಂದೆ ಮೋದಿ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ತೀರ್ಮಾನ ಮಾಡಿತ್ತು. ಅದರೊಂದಿಗೆ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡುವ ನಿರ್ಧಾರವನ್ನು  ಮಾಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎನ್ನುವ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಪ್ರಸ್ತುತ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಅಲ್ಲಿನ ರಾಜ್ಯಾಧಿಕಾರವನ್ನು ವಾಪಾಸ್‌ ನೀಡುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವಿದೆ.

ತಮ್ಮ ಕೈಯಲ್ಲಿ ಬ್ಯಾನರ್‌ ಹಿಡಿದುಕೊಂಡು ಪ್ರತಿಭಟನೆಯಲ್ಲಿ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ಅವರು ಹಿಡಿದಿದ್ದ ಬ್ಯಾನರ್‌ನಲ್ಲಿ, ‘ಕಾಲೆ ದಿನ್‌ ಕಾ ಕಾಲಾ ನಿಶ್ಚಯ್‌ ನಹೀ ಚಲೇಗಾ, ಸಾಲ್ವ್‌ ದ ಕಾಶ್ಮೀರ್‌ ಇಶ್ಯೂ’ ಎಂದು ಬರೆಯಲಾಗಿತ್ತು. ಅದರರ್ಥ, ಕಪ್ಪು ದಿನದ ಕಪ್ಪು ನಿರ್ಣಯ ನಡೆಯೋದಿಲ್ಲ. ಮೊದಲು ಕಾಶ್ಮೀರ ಸಮಸ್ಯೆ ಬಗೆಹರಿಸಿ ಎನ್ನುವುದಾಗಿತ್ತು.

 

 

andolana

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

9 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

9 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

9 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

10 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

10 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

10 hours ago