ದೇಶ- ವಿದೇಶ

ಬಿಜೆಪಿ ದೇಶದ ಧ್ವಜವನ್ನು ಬದಲಾಯಿಸುತ್ತಾರೆ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಮತ್ತು ಧ್ವಜವನ್ನು ಕಿತ್ತುಕೊಂಡಂತೆ ಅವರು (ಬಿಜೆಪಿ) ಈ ದೇಶದ ಧ್ವಜವನ್ನು ಬದಲಾಯಿಸುತ್ತಾರೆ  ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಜೆಪಿ ದೇಶದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಮ್ಮ ಧ್ವಜ ಮತ್ತು ಸಂವಿಧಾನವನ್ನು ಹಿಂಪಡೆಯುತ್ತೇವೆ ಎಂದು ಪ್ರಮಾಣ ಮಾಡಿದ್ದೇವೆ. ಲಕ್ಷಗಟ್ಟಲೆ ಜನರು ಪ್ರಾಣ ತ್ಯಾಗ ಮಾಡಿದ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಮುಂಬರುವ ದಿನಗಳಲ್ಲಿ ಬಿಜೆಪಿಯು ಭಾರತ ದೇಶವನ್ನು ನಿರ್ಮಿಸಿರುವ ಸಂವಿಧಾನದ ತಳಹದಿಯನ್ನು ಮತ್ತು ಅದರ ಜಾತ್ಯತೀತತೆಯನ್ನು ನಾಶಪಡಿಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಇದನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಬಯಸುತ್ತಿದೆ. ಜನರು ಇಂದು ಹೆಮ್ಮೆಯಿಂದ ಹಾರಿಸುತ್ತಿರುವ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸುತ್ತಿದೆ ಎಂದು ಕಿಡಿಕಾರಿದರು.

2019 ಆಗಸ್ಟ್‌ 5 ರಾಜ್ಯದ ಪಾಲಿಗೆ ಕಪ್ಪು ದಿನ ಎಂದು ಹೇಳಿದ್ದಾರೆ. ಆ ದಿನ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಶ್ರೀನಗರದಲ್ಲಿ ಶುಕ್ರವಾರ ಈ ಕುರಿತಾಗಿ ಪ್ರತಿಭಟನೆ ನಡೆಸಿದ ಪಿಡಿಪಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗಿತು. ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಮೆಹಬೂಬಾ ಮುಫ್ತಿ, ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 370ನೇ ವಿಧಿಯನ್ನು ರದ್ದು ಮಾಡಿದ್ದು ಸರ್ಕಾರದ ಕಪ್ಪು ನಿರ್ಧಾರ ಎಂದು ಟೀಕೆ ಮಾಡಿದರು. ಮೂರು ವರ್ಷದ ಹಿಂದೆ ಮೋದಿ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ತೀರ್ಮಾನ ಮಾಡಿತ್ತು. ಅದರೊಂದಿಗೆ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡುವ ನಿರ್ಧಾರವನ್ನು  ಮಾಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎನ್ನುವ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಪ್ರಸ್ತುತ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಅಲ್ಲಿನ ರಾಜ್ಯಾಧಿಕಾರವನ್ನು ವಾಪಾಸ್‌ ನೀಡುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವಿದೆ.

ತಮ್ಮ ಕೈಯಲ್ಲಿ ಬ್ಯಾನರ್‌ ಹಿಡಿದುಕೊಂಡು ಪ್ರತಿಭಟನೆಯಲ್ಲಿ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ಅವರು ಹಿಡಿದಿದ್ದ ಬ್ಯಾನರ್‌ನಲ್ಲಿ, ‘ಕಾಲೆ ದಿನ್‌ ಕಾ ಕಾಲಾ ನಿಶ್ಚಯ್‌ ನಹೀ ಚಲೇಗಾ, ಸಾಲ್ವ್‌ ದ ಕಾಶ್ಮೀರ್‌ ಇಶ್ಯೂ’ ಎಂದು ಬರೆಯಲಾಗಿತ್ತು. ಅದರರ್ಥ, ಕಪ್ಪು ದಿನದ ಕಪ್ಪು ನಿರ್ಣಯ ನಡೆಯೋದಿಲ್ಲ. ಮೊದಲು ಕಾಶ್ಮೀರ ಸಮಸ್ಯೆ ಬಗೆಹರಿಸಿ ಎನ್ನುವುದಾಗಿತ್ತು.

 

 

andolana

Recent Posts

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

3 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

12 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

17 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

26 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

45 mins ago