ದೇಶ- ವಿದೇಶ

ಬಿಜೆಪಿ ದೇಶದ ಧ್ವಜವನ್ನು ಬದಲಾಯಿಸುತ್ತಾರೆ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಮತ್ತು ಧ್ವಜವನ್ನು ಕಿತ್ತುಕೊಂಡಂತೆ ಅವರು (ಬಿಜೆಪಿ) ಈ ದೇಶದ ಧ್ವಜವನ್ನು ಬದಲಾಯಿಸುತ್ತಾರೆ  ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಜೆಪಿ ದೇಶದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಮ್ಮ ಧ್ವಜ ಮತ್ತು ಸಂವಿಧಾನವನ್ನು ಹಿಂಪಡೆಯುತ್ತೇವೆ ಎಂದು ಪ್ರಮಾಣ ಮಾಡಿದ್ದೇವೆ. ಲಕ್ಷಗಟ್ಟಲೆ ಜನರು ಪ್ರಾಣ ತ್ಯಾಗ ಮಾಡಿದ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಮುಂಬರುವ ದಿನಗಳಲ್ಲಿ ಬಿಜೆಪಿಯು ಭಾರತ ದೇಶವನ್ನು ನಿರ್ಮಿಸಿರುವ ಸಂವಿಧಾನದ ತಳಹದಿಯನ್ನು ಮತ್ತು ಅದರ ಜಾತ್ಯತೀತತೆಯನ್ನು ನಾಶಪಡಿಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಇದನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಬಯಸುತ್ತಿದೆ. ಜನರು ಇಂದು ಹೆಮ್ಮೆಯಿಂದ ಹಾರಿಸುತ್ತಿರುವ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸುತ್ತಿದೆ ಎಂದು ಕಿಡಿಕಾರಿದರು.

2019 ಆಗಸ್ಟ್‌ 5 ರಾಜ್ಯದ ಪಾಲಿಗೆ ಕಪ್ಪು ದಿನ ಎಂದು ಹೇಳಿದ್ದಾರೆ. ಆ ದಿನ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಶ್ರೀನಗರದಲ್ಲಿ ಶುಕ್ರವಾರ ಈ ಕುರಿತಾಗಿ ಪ್ರತಿಭಟನೆ ನಡೆಸಿದ ಪಿಡಿಪಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗಿತು. ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಮೆಹಬೂಬಾ ಮುಫ್ತಿ, ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 370ನೇ ವಿಧಿಯನ್ನು ರದ್ದು ಮಾಡಿದ್ದು ಸರ್ಕಾರದ ಕಪ್ಪು ನಿರ್ಧಾರ ಎಂದು ಟೀಕೆ ಮಾಡಿದರು. ಮೂರು ವರ್ಷದ ಹಿಂದೆ ಮೋದಿ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ತೀರ್ಮಾನ ಮಾಡಿತ್ತು. ಅದರೊಂದಿಗೆ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡುವ ನಿರ್ಧಾರವನ್ನು  ಮಾಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎನ್ನುವ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಪ್ರಸ್ತುತ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಅಲ್ಲಿನ ರಾಜ್ಯಾಧಿಕಾರವನ್ನು ವಾಪಾಸ್‌ ನೀಡುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವಿದೆ.

ತಮ್ಮ ಕೈಯಲ್ಲಿ ಬ್ಯಾನರ್‌ ಹಿಡಿದುಕೊಂಡು ಪ್ರತಿಭಟನೆಯಲ್ಲಿ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ಅವರು ಹಿಡಿದಿದ್ದ ಬ್ಯಾನರ್‌ನಲ್ಲಿ, ‘ಕಾಲೆ ದಿನ್‌ ಕಾ ಕಾಲಾ ನಿಶ್ಚಯ್‌ ನಹೀ ಚಲೇಗಾ, ಸಾಲ್ವ್‌ ದ ಕಾಶ್ಮೀರ್‌ ಇಶ್ಯೂ’ ಎಂದು ಬರೆಯಲಾಗಿತ್ತು. ಅದರರ್ಥ, ಕಪ್ಪು ದಿನದ ಕಪ್ಪು ನಿರ್ಣಯ ನಡೆಯೋದಿಲ್ಲ. ಮೊದಲು ಕಾಶ್ಮೀರ ಸಮಸ್ಯೆ ಬಗೆಹರಿಸಿ ಎನ್ನುವುದಾಗಿತ್ತು.

 

 

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago