ದೇಶ- ವಿದೇಶ

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ ಸಂಭವಿಸಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಮೊದಲ ಬಾಂಬ್ ಸ್ಛೋಟಜಲಂಧರ್‌ನ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಮುಖ್ಯ ಕ್ವಾರ್ಟರ್ಸ್ ಬಳಿ ರಾತ್ರಿ 8ಕ್ಕೆ ನಡೆದಿದೆ. ಇದಾದ ಮೂರು ಗಂಟೆಗಳ ಬಳಿಕ ಅಮೃತಸರದ ಖಾಸಾದಲ್ಲಿರುವ ಸೇನಾ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಛೋಟ ಸಂಭವಿಸಿದೆ.

ಅಮೃತಸರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸ್ಛೋಟ ಸಂಭವಿಸಿದ್ದು, ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿದ್ದಾರೆ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅಮೃತಸರ ಗ್ರಾಮೀಣ ಪೊಲೀಸರು, ನಗರ ಪೊಲೀಸರು, ಸೇನೆ, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಎರಡೂ ಸೋಟಗಳಲ್ಲಿ ಯಾವುದೇ ಸಾವು-ನೋವುಗಳು ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಸ್ಪೋಟ ಜಲಂಧರ್ ನಲ್ಲಿ ಬಿಎಸ್‌ಎಫ್ ಚೌಕದಲ್ಲಿ ಸಂಭವಿಸಿದ್ದು, ಸ್ಕೂಟರ್ ಬೆಂಕಿ ಹೊತ್ತಿಕೊಂಡು ಸ್ಛೋಟಿಸಿದೆ. ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ.

ಈ ಸ್ಕೂಟರ್ ಮಾಲೀಕ ಕೊರಿಯರ್ ಕಂಪೆನಿಯಲ್ಲಿ ಕೆಲಸ ಮಾಡುವ ಗುರುಪ್ರೀತ್ ಸಿಂಗ್ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಘಟನೆ ಅಪಘಾತವೋ ಅಥವಾ ದೊಡ್ಡ ಭದ್ರತಾ ಬೆದರಿಕೆ ಉಂಟುಮಾಡುವ ಪ್ರಯತ್ನವೋ ಎಂಬ ಕುರಿತು ತನಿಖೆ ನಡೆಯುತ್ತಿದೆ.

ಅಮೃತ್‌ಸರ ಘಟನೆ
ಅಮೃತ್‌ಸರ ಸೋಟ ಪ್ರಕರಣ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಸುಹೇಲ್ ಖಾಸಿಂ ಮಿರ್, ಪ್ರಾಥಮಿಕ ತನಿಖೆಯ ಪ್ರಕಾರ ರಾತ್ರಿ 11 ಅಥವಾ 11.15ರ ಸುಮಾರಿಗೆ ಖಾಸಾ ಕಡೆಗೆ ಹೋಗುವ ರಸ್ತೆಯಿಂದ ದೊಡ್ಡ ಶಬ್ದ ಕೇಳಿಬಂದ ಮಾಹಿತಿ ಸಿಕ್ಕಿತು. ಕಂಟೋನ್ಮೆಂಟ್ ಗೋಡೆಯ ಮೇಲೆ ವಸ್ತುವೊಂದನ್ನು ಎಸೆದಿದ್ದು, ಕಡಿಮೆ ತೀವ್ರತೆಯ ಸ್ಛೋಟ ಸಂಭವಿಸಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

12 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

12 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

12 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

12 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

12 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

12 hours ago