ದೇಶ- ವಿದೇಶ

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ ಸಂಭವಿಸಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಮೊದಲ ಬಾಂಬ್ ಸ್ಛೋಟಜಲಂಧರ್‌ನ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಮುಖ್ಯ ಕ್ವಾರ್ಟರ್ಸ್ ಬಳಿ ರಾತ್ರಿ 8ಕ್ಕೆ ನಡೆದಿದೆ. ಇದಾದ ಮೂರು ಗಂಟೆಗಳ ಬಳಿಕ ಅಮೃತಸರದ ಖಾಸಾದಲ್ಲಿರುವ ಸೇನಾ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಛೋಟ ಸಂಭವಿಸಿದೆ.

ಅಮೃತಸರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸ್ಛೋಟ ಸಂಭವಿಸಿದ್ದು, ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿದ್ದಾರೆ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅಮೃತಸರ ಗ್ರಾಮೀಣ ಪೊಲೀಸರು, ನಗರ ಪೊಲೀಸರು, ಸೇನೆ, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಎರಡೂ ಸೋಟಗಳಲ್ಲಿ ಯಾವುದೇ ಸಾವು-ನೋವುಗಳು ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಸ್ಪೋಟ ಜಲಂಧರ್ ನಲ್ಲಿ ಬಿಎಸ್‌ಎಫ್ ಚೌಕದಲ್ಲಿ ಸಂಭವಿಸಿದ್ದು, ಸ್ಕೂಟರ್ ಬೆಂಕಿ ಹೊತ್ತಿಕೊಂಡು ಸ್ಛೋಟಿಸಿದೆ. ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ.

ಈ ಸ್ಕೂಟರ್ ಮಾಲೀಕ ಕೊರಿಯರ್ ಕಂಪೆನಿಯಲ್ಲಿ ಕೆಲಸ ಮಾಡುವ ಗುರುಪ್ರೀತ್ ಸಿಂಗ್ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಘಟನೆ ಅಪಘಾತವೋ ಅಥವಾ ದೊಡ್ಡ ಭದ್ರತಾ ಬೆದರಿಕೆ ಉಂಟುಮಾಡುವ ಪ್ರಯತ್ನವೋ ಎಂಬ ಕುರಿತು ತನಿಖೆ ನಡೆಯುತ್ತಿದೆ.

ಅಮೃತ್‌ಸರ ಘಟನೆ
ಅಮೃತ್‌ಸರ ಸೋಟ ಪ್ರಕರಣ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಸುಹೇಲ್ ಖಾಸಿಂ ಮಿರ್, ಪ್ರಾಥಮಿಕ ತನಿಖೆಯ ಪ್ರಕಾರ ರಾತ್ರಿ 11 ಅಥವಾ 11.15ರ ಸುಮಾರಿಗೆ ಖಾಸಾ ಕಡೆಗೆ ಹೋಗುವ ರಸ್ತೆಯಿಂದ ದೊಡ್ಡ ಶಬ್ದ ಕೇಳಿಬಂದ ಮಾಹಿತಿ ಸಿಕ್ಕಿತು. ಕಂಟೋನ್ಮೆಂಟ್ ಗೋಡೆಯ ಮೇಲೆ ವಸ್ತುವೊಂದನ್ನು ಎಸೆದಿದ್ದು, ಕಡಿಮೆ ತೀವ್ರತೆಯ ಸ್ಛೋಟ ಸಂಭವಿಸಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago