ದೇಶ- ವಿದೇಶ

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅಂಧ ವಕೀಲೆ : ನ್ಯಾಯಾಲಯದ ಇತಿಹಾಸದಲ್ಲಿ ಮೈಲಿಗಲ್ಲು

ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ.

ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್‌ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು ಕಳೆದುಕೊಂಡರು. ಜೂನ್‌ 6 ರಂದು ಅವರು ಅರ್ಜಿದಾರರ ಪರವಾಗಿ ಸುಪ್ರೀಂ ಕೋರ್ಟ್‌ಮುಂದೆ ಹಾಜರಾಗಿದ್ದರು.

ಉತ್ತರಾಖಂಡ ಸಿವಿಲ್‌ ನ್ಯಾಯಾಧೀಶರ ನೇಮಕಾತಿಗಾಗಿ ಹೊರಡಿಸಲಾದ ಜಾಹೀರಾತಿನ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿದಾರರ ಪರವಾಗಿ ಭತೇಜಾ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಮುಂದೆ ಹಾಜರಾಗಿದ್ದರು. ನ್ಯಾಯಮೂರ್ತಿ ಸಂಜಯ್‌ ಕರೋಲ್‌ ಮತ್ತು ನ್ಯಾಯಮೂರ್ತಿ ಎಸ್‌.ಸಿ ಶರ್ಮಾ ಅವರ ಪೀಠದ ಮುಂದೆ ಹಾಜರಾಗಿ ವಿಷಯವನ್ನು ಪ್ರಸ್ತಾಪಿಸಿದರು. ಜೂನ್‌ 9 ಕ್ಕೆ ಈ ಬಗ್ಗೆ ವಿಚಾರಣೆಗೆ ಪಟ್ಟಿ ಮಾಡುವಂತೆ ನ್ಯಾಯಾಲಯವು ಒಪ್ಪಿಕೊಂಡಿತು.

ಶಾಲಾ ಶಿಕ್ಷಣವನ್ನು ಆಡಿಯೋಬುಕ್‌ಗಳ ಸಹಾಯದಿಂದ ಪರ್ಣಗೊಳಿಸಿದ ಭತೇಜಾ 2023ರಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿದರು.

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರು ಅವರು, ಇದು ಸಂತೋಷ ಮತ್ತು ದುಖಃ ಎರಡನ್ನು ತರುವ ಕ್ಷಣವಾಗಿದೆ. ನಾನು ಇಲ್ಲಿದ್ದೇನೆ ಎಂದು ಹೆಮ್ಮೆಪಡುತ್ತೇನೆ. ಆದರೆ, ನಾನು ಮೊದಲಿಗಳಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ನನಗೆ ಅನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

5 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

6 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

6 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

9 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

11 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

12 hours ago