ದೇಶ- ವಿದೇಶ

ಬಾಲಿವುಡ್‌ ನಟಿ ಕಾಮಿನಿ ಕೌಶಲ್‌ ವಿಧಿವಶ

ಮುಂಬೈ : ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ.

98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ ನಗರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕಾಮಿನಿ ಕೌಶಾಲ್ 70 ವರ್ಷದ ಚಿತ್ರರಂಗದಲ್ಲಿ ಹಲವು ರೀತಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಕಾಮಿನಿ ಕೌಶಾಲ್ ಧೋ ಭಾಯಿ, ಜಿದ್ದಿ, ಶಬ್ನಮ್, ನಮೂನಾ, ಝಂಜಾರ್, ಬಡೆ ಸರ್ಕಾರ್, ನೈಟ್ ಕ್ಲಬ್, ಗೋದಾನ್, ಪ್ರೇಮ್ ನಗರ್, ಮಹಾ ಚೋರ್ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮದೇ ಛಾಪು ಮೂಡಿಸಿದ್ದರು. ಅಂದಹಾಗೆ ಕಾಮಿನಿ ಕೌಶಾಲ್ ಮೂಲ ಹೆಸರು ಉಮಾ ಕಶ್ಯಪ್. ಸಿನಿಮಾ ರಂಗಕ್ಕೆ ಬಂದ ಬಳಿಕ ಕಾಮಿನಿ ಕೌಶಾಲ್ ಆಗಿದ್ದಾರೆ.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ದಿಗ್ಗಜ ನಟಿ ಕಾಮಿನಿ ಕೌಶಾಲ್ ಲಾಹೋರ್‌ನಲ್ಲಿ ಜನಿಸಿದರು. ಇವರು ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿದ ಕುಟುಂಬದಿಂದ ಬಂದವರಾಗಿದ್ದರು. ಇವರ ತಂದೆ ಶಿವರಾಮ್ ಕಶ್ಯಪ್ ಸಸ್ಯಶಾಸ್ತ್ರಜ್ಞರಾಗಿದ್ದರು. ಕಾಮಿನಿ ಕೌಶಾಲ್ ಚಿಕ್ಕಂದಿನಿಂದಲೇ ಕುದುರೆ ಸವಾರಿ, ಭರತನಾಟ್ಯ, ಈಜು, ಕರಕುಶಲ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೇ ರಂಗಭೂಮಿ, ರೇಡಿಯೋ ನಾಟಕಗಳು ಮುಂತಾದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು.

2022ರಲ್ಲಿ ತೆರೆಕಂಡ ಲಾಲ್‌ಸಿಂಗ್ ಚಡ್ಡಾ ಸಿನಿಮಾದಲ್ಲಿ ಕಾಮಿನಿ ಕೌಶಾಲ್ ಕಾಣಿಸಿಕೊಂಡಿದ್ದರು. 2025ರ ಫೆಬ್ರವರಿಯಲ್ಲಿ 98ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದ ದಿಗ್ಗಜ ನಟಿ ಕಾಮಿನಿ ಕೌಶಾಲ್ ಇಹಲೋಕ ತ್ಯಜಿಸಿದ್ದಾರೆ. ನಟಿ ಸಾವಿಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago