ದೇಶ- ವಿದೇಶ

ಬಾಲಿವುಡ್‌ ನಟಿ ಕಾಮಿನಿ ಕೌಶಲ್‌ ವಿಧಿವಶ

ಮುಂಬೈ : ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ.

98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ ನಗರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕಾಮಿನಿ ಕೌಶಾಲ್ 70 ವರ್ಷದ ಚಿತ್ರರಂಗದಲ್ಲಿ ಹಲವು ರೀತಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಕಾಮಿನಿ ಕೌಶಾಲ್ ಧೋ ಭಾಯಿ, ಜಿದ್ದಿ, ಶಬ್ನಮ್, ನಮೂನಾ, ಝಂಜಾರ್, ಬಡೆ ಸರ್ಕಾರ್, ನೈಟ್ ಕ್ಲಬ್, ಗೋದಾನ್, ಪ್ರೇಮ್ ನಗರ್, ಮಹಾ ಚೋರ್ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮದೇ ಛಾಪು ಮೂಡಿಸಿದ್ದರು. ಅಂದಹಾಗೆ ಕಾಮಿನಿ ಕೌಶಾಲ್ ಮೂಲ ಹೆಸರು ಉಮಾ ಕಶ್ಯಪ್. ಸಿನಿಮಾ ರಂಗಕ್ಕೆ ಬಂದ ಬಳಿಕ ಕಾಮಿನಿ ಕೌಶಾಲ್ ಆಗಿದ್ದಾರೆ.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ದಿಗ್ಗಜ ನಟಿ ಕಾಮಿನಿ ಕೌಶಾಲ್ ಲಾಹೋರ್‌ನಲ್ಲಿ ಜನಿಸಿದರು. ಇವರು ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿದ ಕುಟುಂಬದಿಂದ ಬಂದವರಾಗಿದ್ದರು. ಇವರ ತಂದೆ ಶಿವರಾಮ್ ಕಶ್ಯಪ್ ಸಸ್ಯಶಾಸ್ತ್ರಜ್ಞರಾಗಿದ್ದರು. ಕಾಮಿನಿ ಕೌಶಾಲ್ ಚಿಕ್ಕಂದಿನಿಂದಲೇ ಕುದುರೆ ಸವಾರಿ, ಭರತನಾಟ್ಯ, ಈಜು, ಕರಕುಶಲ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೇ ರಂಗಭೂಮಿ, ರೇಡಿಯೋ ನಾಟಕಗಳು ಮುಂತಾದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು.

2022ರಲ್ಲಿ ತೆರೆಕಂಡ ಲಾಲ್‌ಸಿಂಗ್ ಚಡ್ಡಾ ಸಿನಿಮಾದಲ್ಲಿ ಕಾಮಿನಿ ಕೌಶಾಲ್ ಕಾಣಿಸಿಕೊಂಡಿದ್ದರು. 2025ರ ಫೆಬ್ರವರಿಯಲ್ಲಿ 98ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದ ದಿಗ್ಗಜ ನಟಿ ಕಾಮಿನಿ ಕೌಶಾಲ್ ಇಹಲೋಕ ತ್ಯಜಿಸಿದ್ದಾರೆ. ನಟಿ ಸಾವಿಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

2 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

3 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

4 hours ago