ಟೆಹರಾನ್ : ತನ್ನ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿರುವ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಇರನ್ ಪ್ರತಿಜ್ಞೆ ಮಾಡಿದೆ.
ಭಾನುವಾರ ಮುಂಜಾನೆ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ನಲ್ಲಿರುವ ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾ ಬಂಕರ್ ಬಸ್ಟರ್ ಬಾಂಬ್ ಬಳಸಿ ದಾಳಿ ಮಾಡಿತ್ತು. ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಚಿ ಅಮೆರಿಕ ದಾಳಿಗಳು ಶಾಶ್ವತ ಪರಿಣಾಮಗಳನ್ನು ಬೀರುತ್ತವೆ ಎಂದಿದ್ದಾರೆ.
ಇರಾನಿನ ಶಾಂತಿಯುತ ಪರಮಾಣು ತಾಣಗಳ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ವಿಶ್ವಸಂಸ್ಥೆಯ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದ ಕಿಡಿಕಾರಿರುವ ಅರಫ್ಚಿ ಇಂದು ಬೆಳಿಗ್ಗೆ ನಡೆದ ದಾಳಿಗಳು ಅತಿರೇಕದಿಂದ ಕೂಡಿದವು. ಈ ಅತ್ಯಂತ ಅಪಾಯಕಾರಿ, ಕಾನೂನುಬಾಹಿರ ಮತ್ತು ಕ್ರಿಮಿನಲ್ ನಡವಳಿಕೆಯ ಬಗ್ಗೆ ವಿಶ್ವಸಂಸ್ಥೆಯ ಪ್ರತಿಯೊಬ್ಬ ಸದಸ್ಯ ರಾಷ್ಟ್ರ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.
ಇರಾನ್ಗೆ ತನ್ನ ದೇಶದ ಸಾರ್ವಭೌಮತ್ವ, ಹಿತಾಸಕ್ತಿ ಮತ್ತು ಜನರನ್ನು ರಕ್ಷಿಸಿಕೊಳ್ಳುವ ಹಕ್ಕಿದೆ. ಮಾಸ್ಕೋಗೆ ತೆರಳಿ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಮಾತುಕತೆಗೆ ಯುರೋಪಿಯನ್ ಒಕ್ಕೂಟ ಒತ್ತಾಯ
ಎಲ್ಲ ದೇಶಗಳು ಯುದ್ಧದಿಂದ ಹಿಂದೆ ಸರಿದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ 27 ರಾಷ್ಟ್ರಗಳ ಯುರೋಪಿಯನ್ ಒಕ್ಕೂಟವು ಒತ್ತಾಯಿಸಿದೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…