ಟೆಹರಾನ್ : ತನ್ನ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿರುವ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಇರನ್ ಪ್ರತಿಜ್ಞೆ ಮಾಡಿದೆ.
ಭಾನುವಾರ ಮುಂಜಾನೆ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ನಲ್ಲಿರುವ ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾ ಬಂಕರ್ ಬಸ್ಟರ್ ಬಾಂಬ್ ಬಳಸಿ ದಾಳಿ ಮಾಡಿತ್ತು. ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಚಿ ಅಮೆರಿಕ ದಾಳಿಗಳು ಶಾಶ್ವತ ಪರಿಣಾಮಗಳನ್ನು ಬೀರುತ್ತವೆ ಎಂದಿದ್ದಾರೆ.
ಇರಾನಿನ ಶಾಂತಿಯುತ ಪರಮಾಣು ತಾಣಗಳ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ವಿಶ್ವಸಂಸ್ಥೆಯ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದ ಕಿಡಿಕಾರಿರುವ ಅರಫ್ಚಿ ಇಂದು ಬೆಳಿಗ್ಗೆ ನಡೆದ ದಾಳಿಗಳು ಅತಿರೇಕದಿಂದ ಕೂಡಿದವು. ಈ ಅತ್ಯಂತ ಅಪಾಯಕಾರಿ, ಕಾನೂನುಬಾಹಿರ ಮತ್ತು ಕ್ರಿಮಿನಲ್ ನಡವಳಿಕೆಯ ಬಗ್ಗೆ ವಿಶ್ವಸಂಸ್ಥೆಯ ಪ್ರತಿಯೊಬ್ಬ ಸದಸ್ಯ ರಾಷ್ಟ್ರ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.
ಇರಾನ್ಗೆ ತನ್ನ ದೇಶದ ಸಾರ್ವಭೌಮತ್ವ, ಹಿತಾಸಕ್ತಿ ಮತ್ತು ಜನರನ್ನು ರಕ್ಷಿಸಿಕೊಳ್ಳುವ ಹಕ್ಕಿದೆ. ಮಾಸ್ಕೋಗೆ ತೆರಳಿ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಮಾತುಕತೆಗೆ ಯುರೋಪಿಯನ್ ಒಕ್ಕೂಟ ಒತ್ತಾಯ
ಎಲ್ಲ ದೇಶಗಳು ಯುದ್ಧದಿಂದ ಹಿಂದೆ ಸರಿದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ 27 ರಾಷ್ಟ್ರಗಳ ಯುರೋಪಿಯನ್ ಒಕ್ಕೂಟವು ಒತ್ತಾಯಿಸಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…